ಪಿ ಎಸ್ ಐ ಆಕ್ರಮ ನೇಮಕಾತಿ ಹಗರಣದ ತನಿಖೆ ನಡೆದಿದೆ. ಹಿರಿಯ ಪೊಲೀಸ ಅಧಿಕಾರಿಗಳು ಸಿಕ್ಕು ಬಿದ್ದಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿ ಇರೋದರಿಂದ ನ್ಯಾಯಾಲಯದ ಆದೇಶದಂತೆ ಸರ್ಕಾರ ಮುಂದೆ ಹೆಜ್ಜೆ ಇಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಧಾರವಾಡದ ಎಸ್ ಪಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಪರಮೇಶ್ವರ, ಯಾವದೇ ಆಕ್ರಮ ಮಾಡದ ಇರುವ ವಿಧ್ಯಾರ್ಥಿಗಳನ್ನು ನೇಮಕಾತಿ ಆದೇಶ ಮಾಡ್ತಿರೋ, ಅಥವಾ ಮರು ಪರೀಕ್ಷೆ ನಡೆಸುತ್ತಿರೋ ಎಂದು ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನಾವು ಮರು ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಒಂದು ವೇಳೆ ನಮ್ಮ ಅಭಿಪ್ರಾಯವನ್ನು ನ್ಯಾಯಾಲಯ ಎತ್ತಿ ಹಿಡಿದರೆ, ನ್ಯಾಯಾಲಯದ ಆದೇಶ ಹೊರಬಿದ್ದ ಒಂದು ತಿಂಗಳಲ್ಲೇ ಪಿ ಎಸ್ ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸುತ್ತೆವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.
ಪಿ ಎಸ್ ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ಸಿದ್ದ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm