ಸೆಪ್ಟೆಂಬರ್ 4 ರಂದು ಬರಗಾಲ ಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುವದೆಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಈಗಾಗಲೇ ಬರ ಬಿದ್ದಿರುವ ತಾಲೂಕೂಗಳಲ್ಲಿ ವರದಿ ತರಿಸಿಕೊಂಡಿದ್ದು, ಕೆಲ ತಾಲೂಕಗಳನ್ನು ಬರ ಪೀಡಿತ ತಾಲೂಕು ಘೋಷಿಸುವಂತೆ ಶಾಸಕರು ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಮಳೆಯ ಕೊರತೆಯಿಂದಾಗಿ ಕುಡಿಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸೆಪ್ಟೆಂಬರ್ 4 ರಂದು ಸಂಪುಟದ ಉಪ ಸಮಿತಿ ಸಭೆ ನಡೆಯಲಿದ್ದು, ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಿಸಲಾಗುವದೆಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
1
29 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.