ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ.
ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ಮಾರ್ಟ್ ವಾಚ್ ಗಾಗಿ ಮಂಜುನಾಥ ಹಾಗೂ ಅಸ್ಲಮ್ ನಡುವೆ ಸಣ್ಣ ಜಗಳ ಇತ್ತು ಎನ್ನಲಾಗಿದೆ. ಇಂದು ರಾತ್ರಿ 8-30 ರ ಸುಮಾರಿಗೆ ಮಂಜುನಾಥ, ಅಸ್ಲಮ್ ಬಳಿ ಬಂದಾಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಇ ವೇಳೆ ಪಕ್ಕದಲ್ಲಿದ್ದ ಚಾಕುವಿನಿಂದ ಮಂಜುನಾಥ, ಅಸ್ಲಮ್ ನ ಹೊಟ್ಟೆಗೆ ಇರಿದಿದ್ದಾನೆ. ತಕ್ಷಣ ಅಸ್ಲಮ್ ನನ್ನು ಕಿಮ್ಸ್ ಆಸ್ಪತ್ರೆಗೆ ತರುವಷ್ಟರಲ್ಲಿ ಅಸ್ಲಮ್ ಮೃತಪಟ್ಟಿದ್ದಾನೆ. ಕೊಲೆ ಮಾಡಿರುವ ಮಂಜುನಾಥನನ್ನು ಬಂಧಿಸಲು ಕೇಶ್ವಾಪುರ ಪೊಲೀಸರು ತಂಡ ರಚಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಧಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.