Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಶೈಕ್ಷಣಿಕ ಕಾಶಿಗೆ ಮತ್ತೊಂದು ಕಿರೀಟ. ಕರ್ನಾಟಕದ ಮೊದಲ “ಬಾಹ್ಯಾಕಾಶ ಮತ್ತು ಖಗೋಳವಿಜ್ಞಾನ ಪ್ರಯೋಗಾಲಯ” ಸ್ಥಾಪನೆ.

ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿರುವುದನ್ನು ಇಡೀ ವಿಶ್ವವೇ ಸಂಭ್ರಮಿಸಿದೆ. ಬಾಹ್ಯಾಕಾಶ ಮತ್ತು ಖಗೋಳಶಾಸ್ತ್ರದಲ್ಲಿನ ಸಾಧನೆಗೆ ಇಸ್ರೋ ವಿಶ್ವದೆತ್ತರಕ್ಕೆ ಹೆಸರು ಮಾಡಿದೆ. ಮಕ್ಕಳಿಗೆ ಬಾಹ್ಯಾಕಾಶ ಮತ್ತು ಖಗೋಳ ವಿಜ್ಞಾನದಲ್ಲಿ ಜ್ಞಾನ ನೀಡಲು ಸ್ಪೇಸ್ ಇ ಸ್ಕಾಲರ್, ಹಿಮಾಲಯನ್ ಸ್ಪೇಸ್ ಸೆಂಟರ್ ಮಹತ್ವದ ಹೆಜ್ಜೆ ಇಟ್ಟಿದೆ.

ಸರ್ಕಾರಿ ಶಾಲೆಗಳಲ್ಲಿ ಮಾಹಿತಿ ನೀಡುವ ಕರ್ನಾಟಕದ ಮೊದಲ ಬಾಹ್ಯಾಕಾಶ ಮತ್ತು ಖಗೋಳವಿಜ್ಞಾನ ಪ್ರಯೋಗಾಲಯ ಧಾರವಾಡದ ಕರಡಿಗುಡ್ಡ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆರಂಭಗೊಂಡಿದೆ. 2ನೇ ಮತ್ತು 3ನೇ ಬಾಹ್ಯಾಕಾಶ ಪ್ರಯೋಗಾಲಯಗಳು ಹುಬ್ಬಳ್ಳಿಯ ಕಿರೇಸೂರು ಸರಕಾರಿ ಪ್ರೌಢಶಾಲೆ ಹಾಗೂ ಧಾರವಾಡದ ಸರಕಾರಿ ಪ್ರೌಢಶಾಲೆ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿ ಮುಂದಿನ ವಾರಗಳಲ್ಲಿ ಉದ್ಘಾಟನೆಗೊಳ್ಳಲಿವೆ.

ಮಕ್ಕಳಿಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಪರಿಣಿತಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯ ತೆರೆಯಲು ಜಿಲ್ಲಾ ಶಿಕ್ಷಣ ಇಲಾಖೆ ಒಡಂಬಡಿಕೆಗೆ ಸಹಿ ಹಾಕಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!