ಹುಬ್ಬಳ್ಳಿಯಲ್ಲಿ ಕಳ್ಳರ ಕೈ ಚಳಕ ಮುಂದುವರೆದಿದೆ. ಹುಬ್ಬಳ್ಳಿಯ ಆನಂದ ನಗರದಲ್ಲಿ ಕಸ ಗುಡಿಸೋ ಮಹಿಳೆಯ ಚಿನ್ನದ ಸರ್ ಎಗರಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಕಸ ಗುಡಿಸಲು ಬಂದ ಪೌರ ಕಾರ್ಮಿಕ ಮಹಿಳೆ ಕುಷ್ಟರೋಗ ಆಸ್ಪತ್ರೆ ಬಳಿ ಬರುತ್ತಿದ್ದಂತೆ ಕಳ್ಳರು ಬಂಗಾರದ ಚೈನ್ ತೆಗೆದುಕೊಂಡು ಹೋಗಿದ್ದಾರೆ. ಈ ದೃಶ್ಯ ಸಿ ಸಿ ಟಿ ವಿ ಯಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬಂದಿದ್ದ ಕಳ್ಳರು ಎಸ್ಕೇಪ್ ಆಗಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.