Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ರಾಜ್ಯದಲ್ಲಿ ಲಿಂಗಾಯತ ಸಮರ, ಲಿಂಗಾಯತ ಸರ್ಕಾರ, ಆಗತ್ತಾ ಸಾಕಾರ?

ರಾಜ್ಯ ಕಾಂಗ್ರೇಸ್ ಸರ್ಕಾರ ನೂರು ದಿನ ಪೂರೈಸಿದರ ಬೆನ್ನಲ್ಲೇ ಲಿಂಗಾಯತ ಸಮರ, ಆಡಳಿತಾರೋಡ ಕಾಂಗ್ರೇಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಎಲ್ಲ ಪಕ್ಷ ಸೇರಿ 74 ಲಿಂಗಾಯತ ಶಾಸಕರು ಇದ್ದೇವೆ ಎಂಬ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.

ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ಆಯಕಟ್ಟಿನ ಸ್ಥಾನ ನೀಡದೆ ಇರುವದು ಶಾಮನೂರು ಶಿವಶಂಕರಪ್ಪನವರ ಸಿಟ್ಟಿಗೆ ಕಾರಣವಾಗಿದೆ. ರಾಷ್ಟ್ರೀಯ ವೀರಶೈವ ಮಹಾಸಭಾದ ಅಧ್ಯಕ್ಷರು ಆಗಿರುವ ಶಿವಶಂಕರಪ್ಪ, ಲಿಂಗಾಯತ ಅಧಿಕಾರಿಗಳ ಬೆನ್ನಿಗೆ ನಿಂತಿದ್ದು, ವಿಪಕ್ಷ ಬಿಜೆಪಿ ಸಹ ದ್ವನಿಗೂಡಿಸಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಸನಗೌಡ ಪಾಟೀಲ್ ಯತ್ನಾಳ್, ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಕಾಂಗ್ರೇಸ್ ಸರ್ಕಾರ ಲಿಂಗಾಯತ ಸಮಾಜವನ್ನು ಕಡೆಗಣನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 

ಮತ್ತೊಂದೆಡೆ, ಕಾಂಗ್ರೇಸ್ ಸಚಿವರುಗಳು ಸಾಲು ಸಾಲಾಗಿ ಶಿವಶಂಕರಪ್ಪನವರ ಹೇಳಿಕೆಗೆ ಪ್ರತಿಕ್ರೀಯೆ ನೀಡುತ್ತಿದ್ದಾರೆ. ಕಾಂಗ್ರೇಸ್ ಸರ್ಕಾರದಲ್ಲಿ 7 ಜನರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಅಲ್ಲದೆ ಅಧಿಕಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಜಾತಿ ಜನಾಂಗದ ಆಧಾರದ ಮೇಲೆ ಆಡಳಿತ ನಡೆಸಲು ಅವಕಾಶವಿಲ್ಲ. ಕಾಂಗ್ರೇಸ್ ಸರ್ಕಾರ, ಎಲ್ಲ ವರ್ಗದ ಅಧಿಕಾರಿಗಳನ್ನು ಸಮನಾಗಿ ನೋಡಿಕೊಂಡು ಹೋಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಸಧ್ಯ ರಾಜ್ಯದಲ್ಲಿ ಲಂಗಾಯತ ಸಮರ ಜೋರಾಗಿದ್ದು, ಬಿರುಕು ಮೂಡುವ ಲಕ್ಷಣಗಳು ಕಂಡು ಬರುತ್ತಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!