Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿಗೆ ಪಿಎಚ್ ಡಿ ಪದವಿ

ಧಾರವಾಡದ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿಯವರಿಗೆ ರಾಜ್ಯದ ಪ್ರತಿಷ್ಟಿತ ವಿಶ್ವವಿಧ್ಯಾಲಯಗಳಲ್ಲಿ ಒಂದಾದ ಧಾರವಾಡದ ಕರ್ನಾಟಕ ವಿಶ್ವವಿಧ್ಯಾಲಯ ಪಿ ಎಚ್ ಡಿ ಪದವಿ ಪ್ರಧಾನ ಮಾಡಲಿದೆ. ಕರ್ನಾಟಕ ವಿಶ್ವವಿದ್ಯಾಲಯದ ೭೩ನೇ ಘಟಿಕೋತ್ಸವದಲ್ಲಿ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ ಅವರಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಪಿಎಚ್ ಡಿ ಪ್ರದಾನ ಮಾಡಲಿದ್ದಾರೆ. 

ಮೂಲತಃ‌ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಚಿಕ್ಕೊಪ್ಪ (ಕೆ.ಎಸ್) ಗ್ರಾಮದ ನಿವಾಸಿಯಾದ, ಸಂಯುಕ್ತ ಕರ್ನಾಟಕ ಪತ್ರಿಕೆಯ‌ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ “ಮೊಬೈಲ್ ಆಧಾರಿತ ಪತ್ರಿಕೋದ್ಯಮ: ಸವಾಲುಗಳು ಮತ್ತು ಅವಕಾಶಗಳು” ಎಂಬ ಮಹಾಪ್ರಬಂಧ‌ ಮಂಡಿಸಿದ್ದಾರೆ. ಪತ್ರಿಕೋದ್ಯಮ ಹಾಗೂ ಸಮೂಹ‌ ಸಂವಹನ‌ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಸ್. ಎಂ. ಮಾಲಗತ್ತಿ ಅವರು ಮಾರ್ಗದರ್ಶನ ಮಾಡಿದ್ದು, ವಿಶ್ವನಾಥ ಕೋಟಿಯವರಿಗೆ ಧಾರವಾಡ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಮಾಧ್ಯಮ ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!