ರಾಜ್ಯದ ಗಡಿ ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆದ ಹೊತ್ತಲ್ಲೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ. ಕೇಂದ್ರದ ತನಿಖಾ ಸಂಸ್ಥೆಯಲ್ಲಿ ಧಾಖಲಾಗಿರುವ ಪ್ರಕರಣಗಳನ್ನು ಎದುರಿಸುತ್ತಿರುವ ಓರ್ವ ಸಚಿವರ ನೇತೃತ್ವದಲ್ಲಿ 50 ರಿಂದ 60 ಕಾಂಗ್ರೇಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
