Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

2101 ರ ವೇಳೆಗೆ ಭಾರತದಲ್ಲಿ ಹಿಂದೂಗಳ ಸಂಖ್ಯೆ 127 ಕೋಟಿ. ಹಿಂದೂಗಳಿಗಿಂತ ಮುಸ್ಲೀಮರ ಸಂಖ್ಯೆ ಹೆಚ್ಚು ಅನ್ನೋದು ಮನುವಾದಿ ಮಾಧ್ಯಮಗಳ ಸೃಷ್ಟಿ / ಡಾ. ಎಚ್ ಸಿ ಮಹಾದೇವಪ್ಪ

ಹಿಂದೂಗಳಿಗಿಂತ ಮುಸ್ಲೀಮರ ಸಂಖ್ಯೆ ಹೆಚ್ಚಾಗಿದೆ ಎಂಬ ನೇರವಾದ ಸುಳ್ಳನ್ನು ಹರಿಯಬಿಡುವ ಮೂಲಕ ಬಿಜೆಪಿ ಮತ್ತು ಅದರ ಬೆಂಬಲಿತ ಮಾಧ್ಯಮಗಳು ಚುನಾವಣಾ ಕಾರಣಕ್ಕೆ ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ ಕಿಡಿ ಕಾರಿದ್ದಾರೆ.

“ಎಕ್ಸ್ ” ನಲ್ಲಿ ಬರೆದುಕೊಂಡಿರುವ ಮಹಾದೇವಪ್ಪ, S Y ಖುರೇಶಿಯವರ ಅಧ್ಯಯನದಂತೆ 2101 ರ ವೇಳೆಗೆ ಭಾರತದಲ್ಲಿ ಹಿಂದೂಗಳ ಸಂಖ್ಯೆ 127 ಕೋಟಿ ಇರಲಿದ್ದು ಮುಸ್ಲಿಂರು 32 ಕೋಟಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ. 

ಸೋಲಿನ ಭಯಕ್ಕೆ ಬಿದ್ದ ಮನುವಾದಿ ಪ್ರೇರಿತ ಮಾಧ್ಯಮಗಳು ತಮ್ಮ ಕಾರ್ಪೋರೇಟ ವಲಯಗಳು, ಚುನಾವಣಾ ಅನುಕೂಲಕ್ಕೆ ಪೂರಕವಾದ ಆಲೋಚನೆಯನ್ನು ಬಿತ್ತುತ್ತಿವೆ ಎಂದು ಆರೋಪಿಸಿದ್ದಾರೆ.

ಅನಗತ್ಯವಾಗಿ ಸುಳ್ಳು ಮತ್ತು ದ್ವೇಷ ಹರಡುವ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಎಚ್ಚರಿಕೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!