ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಲಾಭಿ ಜೋರಾಗಿದೆ. ಕಾಂಗ್ರೇಸ್ ನಿಂದ 7 ಜನ ಗೆಲ್ಲುವ ಅವಕಾಶವಿದ್ದು ಪೈಪೋಟಿ ಜೋರಾಗಿದೆ.
ಇದೆಲ್ಲದರ ಮದ್ಯೆ ಹುಬ್ಬಳ್ಳಿ ಧಾರವಾಡಕ್ಕೆ ವಿಧಾನ ಪರಿಷತ್ತಿನ ಒಂದು ಸ್ಥಾನ ನೀಡಲು ಕಾಂಗ್ರೇಸ್ ಹೈಕಮಾಂಡ ಒಪ್ಪಿಗೆ ಸೂಚಿಸಿದೆ.
ಅಲ್ಪಸಂಖ್ಯಾತ ಮುಸ್ಲಿಮ್ ಸಮಾಜದ ಮುಖಂಡರಾದ ಅಲ್ತಾಫ್ ಹಳ್ಳೂರ ಹಾಗೂ ಇಸ್ಮಾಯಿಲ್ ತಮಟಗಾರ ಈ ಇಬ್ಬರ ಹೆಸರು ಕೇಳಿ ಬಂದಿದ್ದು, ಈ ಇಬ್ಬರಲ್ಲಿ ಒಬ್ಬರಿಗೆ ವಿಧಾನ ಪರಿಷತ್ ಸ್ಥಾನ ಸಿಗುವದು ಖಾತ್ರಿಯಾಗಿದೆ.
ಸಚಿವ ಜಮೀರ್ ಅಹ್ಮದಖಾನ ನೇತ್ರತ್ವದಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಶಾಸಕರು ರಾಜ್ಯ ಕಾಂಗ್ರೇಸ್ ಅಧ್ಯಕ್ಷ ಡಿ ಕೆ ಶಿವಕುಮಾರರನ್ನು ಭೇಟಿ ಮಾಡಿದ್ದು, ಮುಸ್ಲಿಮ್ ಸಮುದಾಯಕ್ಕೆ ರಾಜಕೀಯ ಪ್ರಾತಿನಿದ್ಯ ನೀಡುವಂತೆ ಮನವಿ ಮಾಡಿದ್ದಾರೆ.
ಜಮೀರ್ ಅಹ್ಮದಖಾನ ಅಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರಗೆ ಬಹುತೇಕ ಎಮ್ ಎಲ್ ಸಿ ಟಿಕೇಟ್ ಫಿಕ್ಸ್ ಎಂದು ಹೇಳಲಾಗುತ್ತಿದ್ದು, ಜೂನ್ 2 ರಂದು ಅಧಿಕೃತ ಪಟ್ಟಿ ಹೊರಬೀಳಲಿದೆ ಎನ್ನಲಾಗಿದೆ.
