Download Our App

Follow us

Search
Close this search box.
Home » 404 – Page Not Found

ಬಂಧಿಸಿ ಬಂಧಿಸಿ ಪ್ರಜ್ವಲ್ ರೇವಣ್ಣ ಬಂಧಿಸಿ. ಹಾಸನದಲ್ಲಿ ಬ್ರಹತ್ ಪ್ರತಿಭಟನೆ

ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬಂದಿರುವ ಜನ ನೊಂದ ಮಹಿಳೆಯರ ಪರ ದ್ವನಿ ಎತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಪಾಸಪೋರ್ಟ ರದ್ದು ಯಾವಾಗ? ಪ್ರಜ್ವಲ್ ಬಂಧನಕ್ಕೆ ಹಿಂದೇಟು ಯಾಕೆ ಎಂದು ಪ್ರತಿಭಟನಾಕಾರರು ಬಿತ್ತಿ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. 

ಧಾರವಾಡದಿಂದಲೂ ನೂರಕ್ಕೂ ಹೆಚ್ಚು ಜನ ಹಾಸನದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಶಂಕರ ಹಲಗತ್ತಿ, ಬಿ ಎಸ್ ಸೊಪ್ಪಿನ, ಎಲ್ ಆರ್ ಅಂಗಡಿ ಬಿ ಎನ್ ಪೂಜಾರ, ಎ ಎಮ್ ಖಾನ್, ಬಿ ಈ ಇಳಿಗೇರ, ಗಂಗಾಧರ ಗಾಡದ, ಪ್ರತಾಪ ಬಹುರೂಪಿ, ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ, ವಿಶ್ವೇಶ್ವರಿ ಹಿರೇಮಠ, ಪ್ರಭಾವತಿ ದೇಸಾಯಿ, ಸೇರಿದಂತೆ ನೂರಾರು ಜನ ಭಾಗವಹಿಸಿದ್ದಾರೆ.

ಮಹಾರಾಜಾ ಪಾರ್ಕನಿಂದ ಆರಂಭವಾದ ಮೆರವಣಿಗೆಯಲ್ಲಿ ಆಕ್ರೋಶ ಮಡುಗಟ್ಟಿತ್ತು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!