Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಪಂಚ ಗ್ಯಾರಂಟಿ ಯೋಜನೆಗಾಗಿ ತೆರಿಗೆ ಸಂಗ್ರಹಕ್ಕೆ ಖಾಸಗಿ ಸಲಹೆಗಾರರನ್ನು ನೇಮಕ ಮಾಡಿಕೊಂಡ ಸಿದ್ದರಾಮಯ್ಯ ಸರ್ಕಾರ !

ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ಇದೀಗ ಪಂಚ ಗ್ಯಾರಂಟಿ ತಲೆನೋವು ತಂದಿದೆ. ಐದು ಯೋಜನೆಗಳನ್ನು ಮುಂದುವರೆಸಲು ಹಣ ಬೇಕಾಗಿರುವದರಿಂದ, ಅಗತ್ಯ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಲಹೆಗಾರರನ್ನು ನೇಮಕ ಮಾಡಿಕೊಂಡಿದೆ ಎನ್ನಲಾಗಿದೆ. 

ಬೆಂಗಳೂರು ಮೂಲದ ಬೊಸ್ಟನ್ ಕನ್ಸಲ್ಟಂಟ ಗ್ರೂಪ್ ( BCG ) ನ್ನು 6 ತಿಂಗಳ ಅವಧಿಗೆ 9.5 ಕೋಟಿ ನೀಡಿ ಸಲಹೆ ಪಡೆಯಲಿದೆ. ರಾಜ್ಯದ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸಲು ಈ ಸಂಸ್ಥೆ ಸರ್ಕಾರಕ್ಕೆ ಸಲಹೆ ನೀಡಲಿದೆ. 

ಸಾರ್ವಜನಿಕ ಖಾಸಗಿ ಸಹಭಾಗಿತ್ವ, ಮತ್ತು ಸೋರಿಕೆಯನ್ನು ತಡೆಗಟ್ಟಲು bcg ಸಂಸ್ಥೆ ಸಲಹೆ ನೀಡಲಿದೆ. BCG ಸಂಸ್ಥೆ ಹಣಕಾಸು ಇಲಾಖೆಯೊಂದಿಗೆ ಕೆಲಸ ಮಾಡಲಿದೆ. ಇದಕ್ಕಾಗಿ ಸರ್ಕಾರ BCG ಸಂಸ್ಥೆಗೆ 6 ತಿಂಗಳ ಅವಧಿಗೆ 9.5 ಕೋಟಿ ವ್ಯಯಿಸಲಿದೆ. 

ಪಂಚ ಗ್ಯಾರಂಟಿಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಕೋಟಿ ಬೇಕು ಎಂದು ಅಂದಾಜಿಸಲಾಗಿದ್ದು, 5 ಕೋಟಿ 10 ಲಕ್ಷ ಜನ ಗ್ಯಾರಂಟಿ ಲಾಭ ಪಡೆಯುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!