Download Our App

Follow us

Home » ಕರ್ನಾಟಕ » ಆಡಳಿತ ಯಂತ್ರ ಚುರುಕುಗೊಳಿಸಲು ಸಿ ಎಮ್ ಸರಣಿ ಸಭೆ. ನನ್ನನ್ನು ಹಿಡಿದು, ಅಧಿಕಾರಿಗಳು, ಮಂತ್ರಿಗಳು ಯಾರು ಮಹಾರಾಜರಲ್ಲ,

ಆಡಳಿತ ಯಂತ್ರ ಚುರುಕುಗೊಳಿಸಲು ಸಿ ಎಮ್ ಸರಣಿ ಸಭೆ. ನನ್ನನ್ನು ಹಿಡಿದು, ಅಧಿಕಾರಿಗಳು, ಮಂತ್ರಿಗಳು ಯಾರು ಮಹಾರಾಜರಲ್ಲ,

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ್ದಾರೆ.

ಎರಡು ದಿನಗಳ ಕಾಲ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ರಾಜ್ಯದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ನನ್ನನ್ನು ಸೇರಿದಂತೆ, ಅಧಿಕಾರಿಗಳು ಮಂತ್ರಿಗಳು, ಯಾರು ಮಹಾರಾಜರಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತ ಚುರುಕುಗೊಳಿಸುವಂತೆ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪಂಚಾಯತ ಮಟ್ಟದಲ್ಲಿ ಹೋಗಿ ಕೆಲಸ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. 

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂತೋಷ ಲಾಡ್ ಸೇರಿದಂತೆ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!