Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕಾವೇರಿ ಬಿಕ್ಕಟ್ಟು 14 ಕ್ಕೆ ಬೆಂಗಳೂರಿನಲ್ಲಿ ಸರ್ವಪಕ್ಷದ ಸಭೆ. ಮಹಾದಾಯಿಗೆ ಮತ್ತೆ ಮಲತಾಯಿ ಧೋರಣೆ

ಇದೇ ದಿನಾಂಕ 14 ರಂದು ಭಾನುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ” ಕಾವೇರಿ ನದಿ ನೀರಿನ” ಕುರಿತು, ಸರ್ಕಾರ ಸರ್ವಪಕ್ಷಗಳ‌ ಸಭೆಯನ್ನು ಕರೆದಿದೆ. 

ಈ ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಾಗಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಸಲಹೆ ನೀಡಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ. 

ಕರುನಾಡ ಜೀವನದಿ ಕಾವೇರಿಯ ರಕ್ಷಣೆಗಾಗಿ, ನಾಡಿನ ರೈತರ ಹಿತ ಕಾಯುವುದಕ್ಕಾಗಿ ನಿಮ್ಮೆಲ್ಲರ ಸಹಕಾರವಿರಲಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಮಹಾದಾಯಿಗೆ ಮತ್ತೆ ಮಲತಾಯಿ ಧೋರಣೆ 

ಸರ್ಕಾರ ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ತಲೆಕೆಡಿಸಿಕೊಂಡಷ್ಟು ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಅನ್ನೋದು ಈ ಭಾಗದಲ್ಲಿ ಹೋರಾಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ. 

ಕಾವೇರಿ ಜಲಾನಯನ ಪ್ರದೇಶದ ರಾಜಕಾರಣಿಗಳು, ಕಾವೇರಿಗಾಗಿ ತೋರುವ ಆಸಕ್ತಿ, ಇಚ್ಚಾಶಕ್ತಿ, ಒಗ್ಗಟ್ಟು, ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ಇಲ್ಲದೆ ಇರುವದು ದಶಕಗಳ ಹೋರಾಟಕ್ಕೆ ಹಿನ್ನೆಡೆಯಾಗುತ್ತ ಬಂದಿದೆ. 

ಚುನಾವಣೆ ಬಂದಾಗ ಮಹಾದಾಯಿ ಬಗ್ಗೆ ಮಾತನಾಡಿ ಮತ ಪಡೆಯುವ ರಾಜಕಾರಣಿಗಳು, ಶಾಸಕ, ಸಂಸದರಾಗಿ ಆಯ್ಕೆಯಾದ ನಂತರ ಮಹಾದಾಯಿ ದಿಕ್ಕಿನ ಕಡೆ ನೋಡದೆ ಇರುವದು ಆಕ್ರೋಶಕ್ಕೆ ಕಾರಣವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!