Download Our App

Follow us

Home » ಕ್ರೀಡೆ » ವಿಕಲಚೇತನರನ್ನು ‘ಅಪಹಾಸ್ಯ’ ಮಾಡಿದ್ದಕ್ಕಾಗಿ ಮೂವರು ಮಾಜಿ ಭಾರತೀಯ ಕ್ರಿಕೇಟಿಗರ ಮೇಲೆ ದೂರು ಧಾಖಲು

ವಿಕಲಚೇತನರನ್ನು ‘ಅಪಹಾಸ್ಯ’ ಮಾಡಿದ್ದಕ್ಕಾಗಿ ಮೂವರು ಮಾಜಿ ಭಾರತೀಯ ಕ್ರಿಕೇಟಿಗರ ಮೇಲೆ ದೂರು ಧಾಖಲು

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ ನಲ್ಲಿ ವಿಕಲಚೇತನರಿಗೆ ಅಪಹಾಸ್ಯ ಮಾಡಿ ವಿಡಿಯೋ ಹರಿಬಿಟ್ಟಿದ್ದಕ್ಕೆ ಭಾರತೀಯ ಮಾಜಿ ಕ್ರಿಕೇಟಪಟುಗಳಾದ ಯುವರಾಜ್ ಸಿಂಗ್, ಹರ್ಭಜನ್ ಮತ್ತು ಸುರೇಶ್ ರೈನಾ ವಿರುದ್ಧ ದೂರು ಧಾಖಲಾಗಿದೆ. 

ಅಂಗವಿಕಲರಿಗೆ ಉದ್ಯೋಗ ಉತ್ತೇಜನದ ರಾಷ್ಟ್ರೀಯ ಕೇಂದ್ರದ (ಎನ್‌ಸಿಪಿಇಡಿಪಿ) ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಅವರು ಅಮರ್ ಕಾಲೋನಿ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಅಮರ್ ಕಾಲೋನಿ ಪೊಲೀಸ್ ಠಾಣೆ ದೂರು ಸ್ವೀಕರಿಸಿದ್ದು, ಹೆಚ್ಚಿನ ತನಿಖೆಗಾಗಿ ಈ ದೂರನ್ನು ಜಿಲ್ಲೆಯ ಸೈಬರ್ ಸೆಲ್‌ಗೆ ರವಾನಿಸಲಾಗಿದೆ. 

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಫೈನಲ್‌ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಭಾರತ ಚಾಂಪಿಯನ್ಸ್ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಮಾಜಿ ಕ್ರಿಕೆಟಿಗರು, ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಇದು ವಿಕಲಚೇತನರ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!