Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ವಿನಯ್ ಕುಲಕರ್ಣಿ ಮನೆ ಎದುರು ಪಟಾಕಿ ಸಿಡಿಸಿದ ಪ್ರಕರಣ. ಪೊಲೀಸ ಠಾಣೆ ಎದುರು ಅಂಜುಮನ್ ಪ್ರತಿಭಟನೆ

ಧಾರವಾಡ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಿವಲೀಲಾ ಕುಲಕರ್ಣಿ ಅವರು ಪರಾಭವಗೊಂಡ ನಂತರ ಕೆಲವರು ಶಾಸಕ ವಿನಯ್ ಕುಲಕರ್ಣಿ ಅವರ ಧಾರವಾಡ ನಿವಾಸದ ಮುಂದೆ ಪಟಾಕಿ ಸಿಡಿಸಿದ ಈ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಲೇರಿದೆ.

ರಾಜ್ಯ ಸರ್ಕಾರ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕೆಎಂಎಫ್‌ಗೆ ನಾಮನಿರ್ದೇಶನ ಮಾಡಿದ ನಂತರ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರು. ಆದರೆ, ಬಿಜೆಪಿಯ ಶಂಕರ ಮುಗದ ಅವರ ವಿರುದ್ಧ ಶಿವಲೀಲಾ ಪರಾಭವಗೊಂಡ ಕಾರಣಕ್ಕೆ ಅವರ ಮನೆ ಎದುರು ಪಟಾಕಿ ಸಿಡಿಸಿದ್ದರು ಎನ್ನಲಾಗಿದೆ.

ಧಾರವಾಡ ಉಪನಗರ ಠಾಣೆ ಪೊಲೀಸರು ಇಂದು ಬೆಳಿಗ್ಗೆ ಪಟಾಕಿ ಸಿಡಿಸಿದ ರಾಜೇಸಾಬ್ ಅಲ್ಗೂರ್ ಎಂಬಾತನನ್ನು ಠಾಣೆಗೆ ಕರೆತಂದು ಆತನನ್ನು ವಿಚಾರಣೆಗೊಳಪಡಿಸುತ್ತಿದ್ದರು. 

ಈ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಠಾಣೆ ಮುಂದೆ ಜಮಾಯಿಸಿದರು. ರಾಜೇಸಾಬ್‌ನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಪಟಾಕಿ ಸಿಡಿಸಿದ್ದಕ್ಕೆ ಮಾತ್ರ ಈ ರೀತಿ ಭಯೋತ್ಪಾದಕನನ್ನು ಕರೆದುಕೊಂಡು ಬರುವ ರೀತಿಯಲ್ಲಿ ರಾಜೇಸಾಬ್‌ನನ್ನು ಪೊಲೀಸರು ಬೆಳ್ಳಂಬೆಳಿಗ್ಗೆ ಕರೆದುಕೊಂಡು ಬಂದಿದ್ದಾರೆ ಎಂದು ಇಸ್ಮಾಯಿಲ್ ಆರೋಪಿಸಿದರು.

ಪಟಾಕಿ ಹೊಡೆದಿದ್ದಕ್ಕೆ ಮಾತ್ರ ಈ ರೀತಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರುವುದಾದರೆ ಮುಂದಿನ ದಿನಗಳಲ್ಲಿ ನಮ್ಮ ಸಮಾಜದವರೆಲ್ಲ ಸೇರಿ ಓಪನ್ ಆಗಿಯೇ ಪಟಾಕಿ ಹೊಡೆಯುತ್ತೇವೆ ಆಗ ಎಷ್ಟು ಜನರನ್ನು ಪೊಲೀಸರು ಬಂಧಿಸುತ್ತಾರೋ ನೋಡೋಣ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಸವಾಲು ಹಾಕಿದರು.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!