Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಧಾರವಾಡದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರದ ಶಂಕೆ. ಧಾರವಾಡ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿಗಳಿಗೆ ಯಾಮಾರಿಸುವ ಸಾಧ್ಯತೆ

ಧಾರವಾಡದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸದ್ದಿಲ್ಲದೇ ಕೋಟ್ಯಾಂತರ ರೂಪಾಯಿ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಾಗಿ ತರಬೇತಿ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ದಲಿತ ವಿಧ್ಯಾರ್ಥಿಗಳನ್ನು ಧಾರವಾಡದ ವಿವಿಧ ತರಬೇತಿ ಕೇಂದ್ರಗಳಿಗೆ ನಿಯೋಜಿಸಲಾಗಿದೆ.

ನಾಲ್ಕು ತಿಂಗಳ ಅವಧಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ನಿಯಮಾವಳಿಯಂತೆ ತರಗತಿಗಳು ನಡೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ದಲಿತ ವಿಧ್ಯಾರ್ಥಿಗಳ ನಾಲ್ಕು ತರಬೇತಿ ಅವಧಿಗೆ, ಪ್ರತಿ ವಿಧ್ಯಾರ್ಥಿಗೆ 40 ಸಾವಿರ ರೂಪಾಯಿ ತರಬೇತಿ ಶುಲ್ಕ ಹಾಗೂ ಭೋಜನಕ್ಕೆಂದು ತಿಂಗಳಿಗೆ 5 ಸಾವಿರ ರೂಪಾಯಿ ನೀಡುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 1800 ವಿಧ್ಯಾರ್ಥಿಗಳಿಗೆ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆ ನಾಲ್ಕು ತಿಂಗಳಿಗೆ 7 ಕೋಟಿಯಷ್ಟು ಹಣ ಖರ್ಚು ಮಾಡುತ್ತಿದೆ.

ತರಬೇತಿಗೆ ಹಾಜರಾದ ವಿಧ್ಯಾರ್ಥಿಗಳಿಗೆ ದಿನಕ್ಕೆ 8 ಘಂಟೆ ಪಾಠ ಮಾಡಬೇಕಾಗಿದ್ದು, ತರಬೇತಿ ಕೇಂದ್ರಗಳು ಬಯೋ ಮೆಟ್ರಿಕ್ ( ಹಾಜರಾತಿ ) ವ್ಯವಸ್ಥೆ ಅಳವಡಿಸಕೊಳ್ಳಬೇಕೆಂಬ ನಿಯಮವಿದೆ.

ಇಷ್ಟೆಲ್ಲಾ ನೀತಿ ನಿಯಮಗಳಿದ್ದರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಿಯಮ ಪಾಲನೆಯತ್ತ ಗಮನ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಧಾರವಾಡ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಎಂದೇ ಹೆಸರಾಗಿರುವ ದಿವ್ಯ ಪ್ರಭ ಅವರು ಸಮಾಜ ಕಲ್ಯಾಣ ಇಲಾಖೆಯ ಕಡೆ ಗಮನ ಹರಿಸಬೇಕಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!