Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ರೈತ ಹೋರಾಟಗಾರರ ಮೇಲೆ ಅವಾಚ್ಯ ಪದ ಬಳಕೆ. ಶಾಸಕ ಕೋನರೆಡ್ಡಿ ಕ್ಷಮೆ ಕೇಳಲಿ

ರೈತರ ಪರ ಅಂತೇಳಿ, ರೈತ ಹೋರಾಟಗಾರನ ಮೇಲೆ ಅವಾಚ್ಯ ಪದ ಬಳಕೆ ಮಾಡಿರುವ ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. 

ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ನಾಯಕ ಷಣ್ಮುಖ ಗುರಿಕಾರ, ಶಾಸಕ ಎನ್ ಎಚ್ ಕೋನರೆಡ್ಡಿಯವರ ಮೇಲೆ ಹರಿಹಾಯ್ದರು. ಕೋನರೆಡ್ಡಿಯವರು ಮೊನ್ನೆ ತಮ್ಮ ನಿಜ ಸ್ವರೂಪ ತೋರಿಸಿದ್ದು, ರೈತರ ಬಗ್ಗೆ ಹಗುರವಾಗಿ ಮಾತನಾಡಿರುವದನ್ನು ಖಂಡಿಸಿದರು. 

ಅಣ್ಣಿಗೇರಿ ಉಗ್ರಾಣದಲ್ಲಿ ರೈತರ ದಾನ್ಯಗಳು ಕಳುವು ಆದ ಸಂದರ್ಭದಲ್ಲಿ, ರೈತ ಹೋರಾಟಗಾರರಿಗೆ ಅವಾಚ್ಯ ಪದ ಬಳಕೆ ಮಾಡಿದ್ದು, ಅನಾಗರಿಕವಾಗಿ ವರ್ತಿಸಿದ್ದಾರೆ ಎಂದು ತಿಳಿಸಿದರು. 

ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ನಡೆಸಿದ ಜಂಟಿ ಸುದ್ದಿಗೋಷ್ಟಿಯಲ್ಲಿ ಎಸ್ ಬಿ ದಾನಪ್ಪಗೌಡ, ಶಿವಾನಂದ ಹೊಸಳ್ಳಿ, ಶಿವಶಂಕರ ಕಲ್ಲೂರ, ಶಿವಯೋಗಿ ಸುರಕೋಡ, ವಿ ಪಿ ಗುರಿಕಾರ, ಮಲ್ಲಿಕಾರ್ಜುನ ಸಂಗನಗೌಡ ಅಣ್ಣಿಗೇರಿ ಬ್ಲಾಕ್ ಜೆಡಿಎಸ್ ಅಧ್ಯಕ್ಷ ವಿರೇಶ ಶಾನಭೋಗರ ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!