Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಚನ್ನಪಟ್ಟಣ ಕದನ. ಸಿ ಪಿ ಯೋಗೇಶ್ವರ ರಾಜೀನಾಮೆ. ಬಿ ಎಸ್ ಪಿ ಇಂದ ಕಣಕ್ಕೆ

ರಾಜ್ಯದಲ್ಲಿ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಖಾಡಾ ಸಜ್ಜಾಗಿದೆ.

ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ, ಚನ್ನಪಟ್ಟಣದ ಟಿಕೇಟ್ ಜೆಡಿಎಸ್ ಪಾಲಾಗಿದ್ದರ ಪರಿಣಾಮ ಇಂದು ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ಅವರು ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ರಾಜೀನಾಮೆ ಪತ್ರ ನೀಡಿದರು. 

ಬಿ ಎಸ್ ಪಿ ಇಂದ ಸ್ಪರ್ಧೆ ಮಾಡಲಿರುವ ಸಿ ಪಿ ಯೋಗೇಶ್ವರ 

ಕಡೆ ಕ್ಷಣದ ವರೆಗೂ ಬಿಜೆಪಿ ಟಿಕೇಟ್ ಸಿಗತ್ತೆ ಅನ್ನೋ ನಂಬಿಕೆಯಲ್ಲಿದ್ದ ಸಿ ಪಿ ಯೋಗೇಶ್ವರ ಇಂದು ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ. ಸಿ ಪಿ ಯೋಗೇಶ್ವರ, ಪಕ್ಷೇತರನಾಗಿ ಸ್ಪರ್ಧೆ ಮಾಡಿದರೆ, ಅದೇ ಹೆಸರಿನಲ್ಲಿರುವ ಹತ್ತಾರು ಜನರನ್ನು ಕಣಕ್ಕೆ ಇಳಿಸುತ್ತಾರೆ ಎನ್ನುವ ಕಾರಣಕ್ಕೆ ರಾಷ್ಟ್ರೀಯ ಪಕ್ಷವಾಗಿರುವ ಬಿ ಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ. 

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಪ್ರಕ್ರಿಯೆಗಳು ನಡೆದಿದ್ದು, ಶುಕ್ರವಾರದ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!