Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಸಿ ಎಂ ಜೊತೆ ಜಮೀರ್ ಅಹ್ಮದ್ ಖಾನ್ ಅಭಯ. ಇಸ್ಮಾಯಿಲ್ ತಮಟಗಾರ ಮಧ್ಯಸ್ಥಿಕೆ ಸಕ್ಸಸ್, ಸೋಮವಾರ ಖಾದ್ರಿ ನಾಮಪತ್ರ ವಾಪಸ.

ಶಿಗ್ಗಾವಿ ಕಾಂಗ್ರೇಸ್ ಅಭ್ಯರ್ಥಿ ವಿರುದ್ಧ ಸೆಡ್ಡು ಹೊಡೆದು ಕಣಕ್ಕೆ ಇಳಿದಿದ್ದ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಸೋಮವಾರ ನಾಮಪತ್ರ ವಾಪಸ ಪಡೆಯಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಿ ಎಂ ನಿವಾಸ ಕಾವೇರಿಯಲ್ಲಿ ಸಿ ಎಂ ಸಿದ್ದರಾಮಯ್ಯನವರು ಮತ್ತು ಸಚಿವ ಜಮೀರ ಅಹ್ಮದ ಖಾನ ಅವರು ಮಾತುಕತೆ ನಡೆಸಿ, ನಾಮಪತ್ರ ವಾಪಸ ಪಡೆಯಲು ಮನವೊಲಿಸಿದ್ದಾರೆ. 

ಉತ್ತರ ಕರ್ನಾಟಕದ ಮುಸ್ಲಿಮ್ ಸಮಾಜದ ಪ್ರಭಾವಿ ಪ್ರಭಾವಿ ಮುಖಂಡ ಇಸ್ಮಾಯಿಲ್ ತಮಟಗಾರ ಮಧ್ಯಸ್ಥಿಕೆ ವಹಿಸಿದ ಪರಿಣಾಮ ಈ ಬೆಳವಣಿಗೆ ನಡೆದಿದೆ.

ಖಾದ್ರಿಯವರಿಗೆ ಪ್ರಮುಖ ನಿಗಮ ಮಂಡಳಿ ಕೊಡುವ ಭರವಸೆ ನೀಡಲಾಗಿದ್ದು, ಕಾಂಗ್ರೇಸ್ ಅಭ್ಯರ್ಥಿ ಗೆಲುವಿನ ಹೊಣೆ ಅವರ ಮೇಲೆ ಹೊರಿಸಲಾಗಿದೆ. ಭಿನ್ನಾಭಿಪ್ರಾಯ ಮರೆತು, ಎಲ್ಲರ ವಿಶ್ವಾಸಗಳಿಸಿ ಕೆಲಸ ಮಾಡುವಂತೆ ಸಿ ಎಂ ಸಿದ್ದರಾಮಯ್ಯನವರು ಖಾದ್ರಿಯವರಿಗೆ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!