Download Our App

Follow us

Home » ಕರ್ನಾಟಕ » ಉರ್ದು ಶಾಲೆ,ಭಾಷೆ ಸಮಸ್ಯೆಗಳಿಗೆ ಪರಿಹಾರಕ್ಕೆ ಶ್ರಮ- ಉರ್ದು ಅಕಾಡೆಮಿ ಅಧ್ಯಕ್ಷ ಮೌಲಾನಾ ಮಹ್ಮದ್ ಅಲಿ ಖಾಝಿ

ಉರ್ದು ಶಾಲೆ,ಭಾಷೆ ಸಮಸ್ಯೆಗಳಿಗೆ ಪರಿಹಾರಕ್ಕೆ ಶ್ರಮ- ಉರ್ದು ಅಕಾಡೆಮಿ ಅಧ್ಯಕ್ಷ ಮೌಲಾನಾ ಮಹ್ಮದ್ ಅಲಿ ಖಾಝಿ

ಉರ್ದು ಕಲಿಯದ ಜನರಿಗೆ ಉರ್ದು ಅಕಾಡೆಮಿ ತರಬೇತಿ ನೀಡುವ ಮೂಲಕ ಆ ಭಾಷೆಯ ಜ್ಞಾನ ಧಾರೆ ಎರೆಯುವುದು ಹಾಗೂ ಶಾಲೆಗಳಲ್ಲಿ ಉರ್ದು ಭಾಷೆ ಉಳಿಸಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉರ್ದು ಅಕಾಡೆಮಿ ಅಧ್ಯಕ್ಷ ಮೌಲಾನಾ ಮಹ್ಮದ್ ಅಲಿ ಖಾಝಿ ಹೇಳಿದರು.

ಹುಬ್ಬಳ್ಳಿಯಲ್ಲಿಂದು ಉರ್ದು ಒಂದು ದಿನದ ಸಮ್ಮೇಳನದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,  

ಉತ್ತರ ಕರ್ನಾಟಕ ಭಾಗದಲ್ಲಿನ ಗದಗ,‌ ಹಾವೇರಿ , ಹುಬ್ಬಳ್ಳಿ ಧಾರವಾಡ ಸೇರಿದಂತೆ ಮುಂತಾದ ಭಾಗಗಳಲ್ಲಿನ ಉರ್ದು ಕವಿಗಳಿಗೆ ಪ್ರೋತ್ಸಾಹ ಹಾಗೂ ಉರ್ದು ಶಾಲೆಗಳಲ್ಲಿನ ಸಮಸ್ಯೆ ಕುರಿತು ಚರ್ಚಿಸಿ, ಅದಕ್ಕೆ ಪರಿಹಾರ ಸಹ ಕಂಡುಕೊಳ್ಳಲಾಗುವುದು ಎಂದರು.

ಕರ್ನಾಟಕ ಸರಕಾರ ಸಾಕಷ್ಟು ಪ್ರೋತ್ಸಾಹ ಉರ್ದು ಅಕಾಡೆಮಿಗೆ ಕೊಟ್ಟಿದ್ದು ಇದರ ಸದುಪಯೋಗ ಆಗಲಿ ಎಂಬುದು ನಮ್ಮ ಉದ್ದೇಶ ಎಂದರು. ಉರ್ದು ಭಾಷೆ,ಸಾಹಿತ್ಯ ನಶಿಸಿ ಹೋಗುವ ಕಾಲದಲ್ಲಿ ಇಂದು ಪುನರ್‌ಜನ್ಮ ಪಡೆದುಕೊಳ್ಳುತಿದ್ದು, ಇದಕ್ಕೆ ಉರ್ದು ಅಕಾಡೆಮಿ ಸಾಕಷ್ಟು ಪ್ರೋತ್ಸಾಹ ಕೊಡುತ್ತದೆ ಎಂದರು.  

ಉರ್ದುಭಾಷೆ ಸಾಮರಸ್ಯದ ಭಾಷೆ. ಸರ್ವಧರ್ಮೀಯರು ಮಾತನಾಡುವ ಭಾಷೆ ಆದ್ದರಿಂದ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!