Download Our App

Follow us

Home » ಕಾನೂನು » ಲೋಕಾಯುಕ್ತಕ್ಕೆ ಸರ್ಕಾರ, ಮತ್ತಷ್ಟು ಅಧಿಕಾರ ಕೊಡಬೇಕು. ಶಿಕ್ಷೆ ಪ್ರಮಾಣ ಶೇಕಡಾ 25 ರಷ್ಟು ಮಾತ್ರ. ಉಪ ಲೋಕಾಯುಕ್ತ ಫಣಿಂದ್ರ

ಲೋಕಾಯುಕ್ತಕ್ಕೆ ಸರ್ಕಾರ, ಮತ್ತಷ್ಟು ಅಧಿಕಾರ ಕೊಡಬೇಕು. ಶಿಕ್ಷೆ ಪ್ರಮಾಣ ಶೇಕಡಾ 25 ರಷ್ಟು ಮಾತ್ರ. ಉಪ ಲೋಕಾಯುಕ್ತ ಫಣಿಂದ್ರ

ಕರ್ನಾಟಕ ಸರ್ಕಾರ, ಕರ್ನಾಟಕ ಲೋಕಾಯುಕ್ತಕ್ಕೆ ಕೊಟ್ಟ ಅಧಿಕಾರದ ವ್ಯಾಪ್ತಿಯಲ್ಲಿಯೇ ಕೆಲಸ ಮಾಡುತ್ತಿದೆ ಎಂದು ಉಪ ಲೋಕಾಯುಕ್ತ ಕೆ ಎನ್ ಫಣಿಂದ್ರ ಹೇಳಿದ್ದಾರೆ. 

ಧಾರವಾಡದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರ ಲೋಕಾಯುಕ್ತಕ್ಕೆ ಮತ್ತಷ್ಟು ಅಧಿಕಾರ ಕೊಡಬೇಕು ಎಂದು ಅಭಿಪ್ರಾಯಪಟ್ಟರು.

ಧಾರವಾಡದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು, ಅನೇಕ ಸ್ಥಳಗಳಿಗೆ ಖುದ್ದು ಭೇಟಿ ನೀಡಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದ್ದೇವೆ ಎಂದರು.

ಕೆಲಗೇರಿ ಕೆರೆ ಅಭಿವೃದ್ಧಿ ಮತ್ತು ಸ್ವಚ್ಛತೆಗೆ 20 ದಿನಗಳ ಸಮಯಾವಕಾಶ ಕೊಟ್ಟಿದ್ದು, ಪ್ರಗತಿಯ ವರದಿ ನೀಡುವಂತೆ ಹೇಳಿದ್ದೇವೆ ಎಂದರು. ಅಲ್ಲದೇ ಹುಬ್ಬಳ್ಳಿ ಧಾರವಾಡದಲ್ಲಿ ರಾಜ ಕಾಲುವೆ ಒತ್ತುವರಿ ಬಗ್ಗೆ ಕರ್ನಾಟಕ ಫೈಲ್ಸ್. ಕಾಮ್ ಲೋಕಾಯುಕ್ತರ ಗಮನ ಸೆಳೆದಾಗ, ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವದು ಎಂದರು. 

ಕರ್ನಾಟಕ ಸರ್ಕಾರ, ಕರ್ನಾಟಕ ಲೋಕಾಯುಕ್ತಕ್ಕೆ ಬೇಕಿರುವಷ್ಟು ಸಿಬ್ಬಂದಿ ಕೊಟ್ಟಿದ್ದು, ಸರ್ಕಾರದ ಕಡೆಯಿಂದ ಅಸಹಕಾರವಾಗಲಿ, ಅಸಮಾಧಾನವಾಗಲಿ ಇಲ್ಲ ಎಂದರು. ಲೋಕಾಯುಕ್ತ ಪ್ರಕರಣದಲ್ಲಿ ಶೇಕಡಾ 25 ರಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!