Download Our App

Follow us

Home » ಕರ್ನಾಟಕ » ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್. ಸರ್ಕಾರ ಕ್ಷಮೆ ಕೇಳಲಿ – ಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್. ಸರ್ಕಾರ ಕ್ಷಮೆ ಕೇಳಲಿ – ಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿರುವ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮಿಗಳು ರಾಜ್ಯ ಸರ್ಕಾರ ಸಮುದಾಯದ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಂತಿಯುತ ಪ್ರತಿಭಟನೆ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ ಎಂದರು. ಕಾಂಗ್ರೇಸ್ ಸರ್ಕಾರ ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ಹಗುರವಾಗಿ ಪರಿಗಣಿಸಿದೆ ಎಂದರು. 

ನಿನ್ನೇ ನಡೆದ ಲಾಠಿ ಚಾರ್ಜ್ ನಲ್ಲಿ ಸಮುದಾಯದವರಿಗೆ ಬಹಳಷ್ಟು ಪೆಟ್ಟು ಬಿದ್ದಿದ್ದು, ಗಾಯಗೊಂಡಿದ್ದಾರೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವದು ಬೇಡ. ಸಮಾಜವೇ ಭರಿಸಲಿದೆ ಎಂದರು. 

ಸುದ್ದಿಗೋಷ್ಟಿಯುದ್ಧಕ್ಕೂ ಎಡಿಜಿಪಿ ಮೇಲೆ ಹರಿಹಾಯ್ದ ಸ್ವಾಮೀಜಿಗಳು, ಲಾಠಿ ಚಾರ್ಜ್ ಮಾಡಲು ಕಾರಣರಾದ ಎಡಿಜಿಪಿ ಹಿತೇಂದ್ರರನ್ನು ಅಮಾನತು ಮಾಡುವಂತೆ ಶ್ರೀಗಳು ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!