Download Our App

Follow us

Home » ಆರೋಗ್ಯ » ಸಿಸೇರಿಯನ್ ಹೆರಿಗೆ ಬದಲು ಸಹಜ ಹೆರಿಗೆಗೆ ಒತ್ತು. ಆರೋಗ್ಯ ಇಲಾಖೆಯ ದಿಟ್ಟ ಹೆಜ್ಜೆ. ಸರ್ಕಾರಿ ಹೆರಿಗೆ ಆಸ್ಪತ್ರೆಗಳು ಫುಲ್..

ಸಿಸೇರಿಯನ್ ಹೆರಿಗೆ ಬದಲು ಸಹಜ ಹೆರಿಗೆಗೆ ಒತ್ತು. ಆರೋಗ್ಯ ಇಲಾಖೆಯ ದಿಟ್ಟ ಹೆಜ್ಜೆ. ಸರ್ಕಾರಿ ಹೆರಿಗೆ ಆಸ್ಪತ್ರೆಗಳು ಫುಲ್..

ರಾಜ್ಯದಲ್ಲಿ ಅನಗತ್ಯವಾಗಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಶೇ.46ರಷ್ಟು ಹೆರಿಗೆಗಳು ಸರ್ಜರಿ ಮೂಲಕ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ ತಿಳಿಸಿದ್ದಾರೆ. 

ಈ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಸಹಜ ಹೆರಿಗೆಗೆ ಉತ್ತೇಜನ ನೀಡಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಸಹಜ ಹೆರಿಗೆಗಳನ್ನು ಹೆಚ್ಚಿಸಲು ರಾಜ್ಯದಲ್ಲಿ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದೆ. ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ 24×7 ಮಾದರಿಯಲ್ಲಿ ಪ್ರಸೂತಿ ಸೇವೆ ಲಭ್ಯಗೊಳ್ಳುವಂತೆ ಬಲಪಡಿಸಲಾಗುತ್ತಿದೆ ಎಂದರು. 

ಸಹಜ ಹೆರಿಗೆ ಸಂಬಂಧ, ಶುಶ್ರೂಷಾಧಿಕಾರಿಗಳಿಗೆ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಹೇಳಿರುವ ದಿನೇಶ್ ಗುಂಡುರಾವ, ಸಿಸೇರಿಯನ್ ಹೆರಿಗೆ ಪ್ರಮಾಣ ಕಡಿಮೆ ಮಾಡಲು ಆರೋಗ್ಯ ಇಲಾಖೆ ಕೆಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು. 

ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುತ್ತಿದ್ದ ಬಹುತೇಕ ಸ್ಥಿತಿವಂತರು ಈಗ ಸಹಜ ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ.

ಧಾರವಾಡದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ದಿನ 20 ಮಕ್ಕಳ ಜನನವಾಗುತ್ತಿದೆ. ಸಹಜ ಹೆರಿಗೆಗೆ ಧಾರವಾಡದ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹೆಸರುವಾಸಿಯಾಗಿದೆ. ಇಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ವಿಶೇಷ ಕಾಳಜಿ ವಹಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಸನಗೌಡ ಪಾಟೀಲ ಯತ್ನಾಳ ಕ್ಷೇತ್ರದಲ್ಲಿ ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು.  ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ

Live Cricket

error: Content is protected !!