Download Our App

Follow us

Home » ರಾಜಕೀಯ » ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮಾಜಿ ಶಾಸಕರ ಸಹೋದರ / ಪ್ರಿಯಾಂಕ್ ಖರ್ಗೆ ಕೆಂಡಾಮಂಡಲ್

ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮಾಜಿ ಶಾಸಕರ ಸಹೋದರ / ಪ್ರಿಯಾಂಕ್ ಖರ್ಗೆ ಕೆಂಡಾಮಂಡಲ್

ಬಿಜೆಪಿಯ ಮಾಜಿ ಶಾಸಕ ರಾಜಕುಮಾರ್ ಪಾಟೀಲ ತೆಲ್ಕೂರ್ ಸಹೋದರ ಜಿ ಬಿ ಪಾಟೀಲ ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ವಿಡಿಯೋವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. 

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಬಗ್ಗೆ ಮಾತನಾಡಿ ಕಲಬುರಗಿಯನ್ನು ಪ್ರಿಯಾಂಕ್ ಖರ್ಗೆ ರಿಪಬ್ಲಿಕ್ ಕಲಬುರಗಿ ಮಾಡಿದ್ದಾರೆಂದು ಬಿಜೆಪಿ ಆರೋಪ ಮಾಡಿತ್ತು. 

ಇದರ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಇದೀಗ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಮೇಲೆ ಮುಗಿಬಿದ್ದಿದ್ದಾರೆ. ಇದು ಬಿಜೆಪಿಯವರು ಮಾಡಲು ಹೊರಟಿರುವ ಕಲಬುರಗಿ ರಿಪಬ್ಲಿಕ್ ವೇ ಎಂದು ತಿರುಗೇಟು ನೀಡಿದ್ದಾರೆ.

ಅವರು ಎಕ್ಸ್ ನಲ್ಲಿ ಬರೆದಿರುವ ಸಾರಾಂಶ ಇಲ್ಲಿದೆ.

ಪ್ರಿಯಾಂಕ್ ಖರ್ಗೆ

ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ ಬಿ ಪಾಟೀಲ್ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿದ್ದಾರೆ, ಇದು “ಕಲಬುರಗಿ ರಿಪಬ್ಲಿಕ್“ ಮಾಡುವ ಪ್ರಯತ್ನವೇ?

ಬಿಜೆಪಿಗರ ಪ್ರಕಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ?

ಕಲಬುರಗಿ ರಿಪಬ್ಲಿಕ್ ಎನ್ನುತ್ತಿದ್ದ ಬೆಂಗಳೂರಿನ ಬಿಜೆಪಿ ನಾಯಕರು ತಮ್ಮದೇ ಪಕ್ಷದವರ ಈ ಕುಕೃತ್ಯಕ್ಕೆ ಯಾವ ಸಮಜಾಯಿಷಿ ನೀಡುತ್ತಾರೆ?

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರವನ್ನು ಕಾಲಿನ ಸಮದಲ್ಲಿಟ್ಟು ಅಂಬೇಡ್ಕರ್ ವಿರೋಧಿ ಅಮಿತ್ ಶಾ ಅವರನ್ನು ಮೆಚ್ಚಿಸುವ ಪ್ರಯತ್ನವೇ @BJP4Karnataka?

ಡಾ। ಅಂಬೇಡ್ಕರ್ ಅವರ ಫೋಟೋ ಕಾಲ ಕೆಳಗಿಟ್ಟುಕೊಂಡು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ?

ಇದಕ್ಕಾಗಿ ಒಂದು ಸತ್ಯ ಶೋಧನ ಸಮಿತಿ ರಚಿಸಿಕೊಂಡು, ನಕಲಿ ಅಂಬೇಡ್ಕರ್ ವಾದಿಗಳಾದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರ ಜೊತೆಗೆ ಯಾವಾಗ ಕಲಬುರ್ಗಿಗೆ ಬರುತ್ತೀರಿ @ಬಿವೈವಿಜಯೇಂದ್ರ ಅವರೇ?

https://x.com/PriyankKharge/status/1873580371931214053

ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!