Download Our App

Follow us

Home » ಭಾರತ » ನವದೆಹಲಿ ರೈಲ್ವೇ ನಿಲ್ದಾಣದಲ್ಲಿ 18 ಜನರ ಸಾವು. ಕುಂಭಮೇಳಕ್ಕೆ ಹೊರಟಾಗ ನಡೆದ ಘಟನೆ

ನವದೆಹಲಿ ರೈಲ್ವೇ ನಿಲ್ದಾಣದಲ್ಲಿ 18 ಜನರ ಸಾವು. ಕುಂಭಮೇಳಕ್ಕೆ ಹೊರಟಾಗ ನಡೆದ ಘಟನೆ

ದೆಹಲಿ ರೈಲು ನಿಲ್ದಾಣದಲ್ಲಿ ಭೀಕರ ದುರಂತ ನಡೆದಿದೆ. ರೇಲ್ವೆ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷದಿಂದ ಕಾಲ್ತುಳಿತ ಸಂಭವಿಸಿ 18 ಜನ ಪ್ರಾಣ ಕಳೆದುಕೊಂಡಿದ್ದಾರೆ. 

ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಗರಾಜಗೆ ಹೋಗಲು ಸಿದ್ದರಾಗಿ ನಿಂತಿದ್ದರು. ರೈಲು ಬಹಳಷ್ಟು ತಡವಾಗಿದ್ದರಿಂದ ಪ್ರಯಾಣಿಕರು ಸುಸ್ತು ಹೊಡೆದಿದ್ದರು. 

ಇನ್ನೇನು ರೈಲು ಬಂತು ಅನ್ನುವಷ್ಟರಲ್ಲಿ ಮೈಕ್ ನಲ್ಲಿ ಪ್ರಯಾಗರಾಜ ಹೋಗುವ ರೈಲು ಪ್ಲಾಟ್ ಫಾರ್ಮ್ 12 ರ ಬದಲು 16 ಕ್ಕೆ ಬರಲಿದೆ ಎಂದು ಹೇಳಿದ್ದೆ ತಡ ಎಲ್ಲರು, ಓಡೋಡಿ ಹೋಗಿದ್ದಾರೆ. 

ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ, 18 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. 

ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೇ ಇಲಾಖೆ ತನಿಖೆಗೆ ಆದೇಶ ನೀಡಿದೆ. ಪ್ರಯಾಗರಾಜಗೆ ಸಾಕಷ್ಟು ಸಂಖ್ಯೆಯಲ್ಲಿ ರೈಲು ಬಿಡದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!