ಹುಬ್ಬಳ್ಳಿಯ ಸಾಯಿನಗರದಲ್ಲಿ 11 ಮೇವಿನ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದೆ.
ದಿನೇ ದಿನೇ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಮೇವಿನ ಬಣವಿಗಳಿಗೆ ಬೆಂಕಿ ಬಿದ್ದ ಪರಿಣಾಮ ದಟ್ಟವಾದ ಹೊಗೆ ಆವರಿಸಿದೆ.
ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಮಗ್ನರಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಣವಿಗಳು ಸುಟ್ಟು ಕರಕಲಾಗಿವೆ.
