ರಾಜ್ಯದಲ್ಲಿ ಹನಿ ಟ್ರಾಪ್ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಸತೀಶ ಜಾರಕಿಹೊಳಿಯವರ ನವದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.
ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಜಾರಕಿಹೊಳಿಯವರು ಪರಸ್ಪರ ಚರ್ಚೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಬಳಿಕ ಸತೀಶ ಜಾರಕಿಹೊಳಿಯವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸಹ ಭೇಟಿ ಮಾಡಿದ್ದು ವಿಶೇಷವಾಗಿದೆ.
