Download Our App

Follow us

Home » ಭಾರತ » ವಕ್ಫ್ ತಿದ್ದುಪಡಿ ಕಾಯ್ದೆ: ಮುಸ್ಲಿಮೇತರರನ್ನು ವಕ್ಫ್ ಮಂಡಳಿಗಳಿಗೆ ನೇಮಿಸುವುದಿಲ್ಲ, ಸದ್ಯಕ್ಕೆ ಅಸ್ತಿತ್ವದಲ್ಲಿರುವ ವಕ್ಫ್‌ಗಳನ್ನು ರದ್ದುಗೊಳಿಸುವುದಿಲ್ಲ / ಕೇಂದ್ರ ಸರ್ಕಾರ. ಮೇ 5 ಕ್ಕೆ ವಿಚಾರಣೆ

ವಕ್ಫ್ ತಿದ್ದುಪಡಿ ಕಾಯ್ದೆ: ಮುಸ್ಲಿಮೇತರರನ್ನು ವಕ್ಫ್ ಮಂಡಳಿಗಳಿಗೆ ನೇಮಿಸುವುದಿಲ್ಲ, ಸದ್ಯಕ್ಕೆ ಅಸ್ತಿತ್ವದಲ್ಲಿರುವ ವಕ್ಫ್‌ಗಳನ್ನು ರದ್ದುಗೊಳಿಸುವುದಿಲ್ಲ / ಕೇಂದ್ರ ಸರ್ಕಾರ. ಮೇ 5 ಕ್ಕೆ ವಿಚಾರಣೆ

ದೇಶದಾಧ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ಸರ್ವೋಚ್ಚ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು.

ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರ್ಪಡೆಗೊಳಿಸುವದು ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿ-ನೋಟಿಫೈ ಮಾಡುವ ನಿಬಂಧನೆಗಳು ಸೇರಿದಂತೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಕೆಲವು ಪ್ರಮುಖ ನಿಬಂಧನೆಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. 

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಪಿವಿ ಸಂಜಯ್ ಕುಮಾರ್ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನೀಡಿದ ಭರವಸೆಯನ್ನು ದಾಖಲಿಸಿಕೊಂಡಿತು.

ಕಾಯ್ದೆಯ ನಿಬಂಧನೆಗಳಿಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯವು ಸರ್ಕಾರಕ್ಕೆ ಏಳು ದಿನಗಳ ಕಾಲಾವಕಾಶ ನೀಡಿದೆ. ಅರ್ಜಿದಾರರು ಐದು ದಿನಗಳ ಒಳಗೆ ತಮ್ಮ ಪ್ರತಿವಾದವನ್ನು ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಅಲ್ಲದೇ ಮೇ 5 ರಂದು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ತ್ರಿಸದಸ್ಯ ಪೀಠ ಹೇಳಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!