ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು.
ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ ಬೆಂಬಲಿಗರು ವಿವಿಧ ಸ್ಥಾನಗಳಿಗೆ ರಾಜುನಾಮೆ ನೀಡಿದ ಬಳಿಕ ಬಿಜೆಪಿ ಮತ್ತೆ ಪಕ್ಷ ಸಂಘಟನೆ ಗಟ್ಟಿಗೊಳಿಸಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ವಿಜಯಪುರದಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ಮೂಲಕ ಸಾಕ್ಷಿಯಾದರು.
ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯಾದ ಬಳಿಕ ಬಿ ವೈ ವಿಜಯೇಂದ್ರ ಮೊದಲ ಬಾರಿ ವಿಜಯಪುರದಲ್ಲಿ ಯಶಸ್ವಿ ಜನಾಕ್ರೋಶ ಯಾತ್ರೆ ಮಾಡಿದಂತಾಗಿದೆ.
