ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮತ್ತು ಕನ್ನಡಿಗರ ಪರಿಸ್ಥಿತಿ ಅಯೋಮಯವಾಗಿದೆ. ಕೆಲಸಕ್ಕೆಂದು ಬೆಂಗಳೂರಿಗೆ ಬರುವ ಯುವತಿಯರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ಘಟನೆಗಳು ಸಾಮಾನ್ಯವಾಗಿವೆ.
ಬೆಂಗಳೂರಿನ ಬೆಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಸ್ವಲ್ಪ ತಾಗಿತೆಂದು ಕಿರಿಕ್ ತೆಗೆದ ಹೊರ ರಾಜ್ಯದ ಯುವತಿ ಕನ್ನಡಿಗ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ಆ ದರಿದ್ರ ಯುವತಿಯ ವಿರುದ್ಧ ಬೆಳಂದೂರು ಠಾಣೆಯಲ್ಲಿ FIR.234/2025 ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
