ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರು ಇನ್ನೋವಾ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
8 ಜನ ಪ್ರಯಾಣಿಕರಿದ್ದ ಇನ್ನೋವಾ ಕಾರು ಅಪಘಾತಕ್ಕೆ ಒಳಗಾಗಿದ್ದು, ಮೃತರನ್ನು ಕಾಳಪ್ಪ, ಪುರುಷೋತ್ತಮ್, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿದ್ದಾರೆ.
ಅಪಘಾತದ ರಭಸಕ್ಕೆ ಹೆದ್ದಾರಿಯಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
