ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಾಗರಕ ಸಮಾಜ ತಲೆ ತಗ್ಗಿಸುವಂತಹ ಹೀನ ಘಟನೆಯೊಂದು ನಡೆದಿದೆ. ಶಾಲೆಯಲ್ಲಿ ಅಡುಗೆ ಮಾಡಲು ದಲಿತ ಮಹಿಳೆ ನೇಮಕ ಮಾಡಿದ ಬೆನ್ನಲ್ಲೇ ಪಾಲಕರು, ಮಕ್ಕಳನ್ನು ಶಾಲೆ ಬಿಡಿಸಿ, ಬೇರೆ ಶಾಲೆಗೆ ಸೇರಿಸಿದ ಘಟನೆ ನಡೆದಿದೆ.
ಈ ಘಟನೆ ಚಾಮರಾಜನಗರ ತಾಲೂಕಿನ ಹೊಮ್ಮ ಎಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ಶಾಲೆಯಲ್ಲಿ ಒಟ್ಟು 22 ಮಕ್ಕಳು ಧಾಖಲಾಗಿದ್ದರು. ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಕವಾದ ನಂತರ ಈ ಶಾಲೆಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಶಾಲೆಗೆ ಬರುತ್ತಿದ್ದಾನೆ.
ಚಾಮರಾಜನಗರ ತಾಲೂಕಿನಲ್ಲಿ ಇಂತಹ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸಬೇಕಾಗಿದೆ.
