ಶಿಗ್ಗಾವಿಯಲ್ಲಿ ಹಾಡುಹಗಲೇ ನಡೆದ ಗುತ್ತಿಗೆದಾರನ ಬರ್ಬರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಕೊಂಡೋಜಿ ಕ್ರಾಸ್ ಬಳಿ ಈ ಪೈರಿಂಗ್ ನಡೆದಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿ ಹೋದಾಗ ಈ ಘಟನೆ ನಡೆದಿದೆ.
ಆರೋಪಿಗಳನ್ನ ವಶಕ್ಕೆ ಪಡೆಯುವಾಗ ಪೈರಿಂಗ್ ಮಾಡಲಾಗಿದೆ. ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್ಗೆ ಕಾಲಿಗೆ ಪೈರಿಂಗ ಮಾಡಲಾಗಿದೆ.
ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಮತ್ತು ಪಿಎಸ್ಐ ಸಂಪತ್ ಅವರಿಂದ ಪೈರಿಂಗ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಗಾಯಾಳು ಆರೋಪಿಗಳನ್ನ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
