ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ಯಾವ ಸಂದರ್ಭದಲ್ಲಿ ಏನು ಹೇಳಬೇಕಿತ್ತೋ ಅದನ್ನು ಹೇಳಿದ್ದೆನೆ ಅಷ್ಟೇ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಎಷ್ಟು ಹೋರಾಟ ಮಾಡ್ತಾರೋ ಮಾಡಲಿ, ಅವರಿಗೆ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ ಎಂದರು. ಬರಗಾಲ ಪೀಡಿತ ಪ್ರದೇಶಗಳ ಬಗ್ಗೆ ನಿನ್ನೇ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಶೀಘ್ರದಲ್ಲಿ ಘೋಷಣೆ ಮಾಡಲಾಗುವದೆಂದು ಪರಮೇಶ್ವರ ತಿಳಿಸಿದರು. ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೆ ಕಾನೂನು ಇದೆಯಾ ಎಂದು ಪ್ರಶ್ನಿಸಿದರು. ಯಾರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.