Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಸಿದ್ದ. ಶಾಸಕ ಅರವಿಂದ ಬೆಲ್ಲದ ಚಾಲೆಂಜ್

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಕೊಡುವಂತೆ ಆಗ್ರಹಿಸಿ ಬೆಲ್ಲದ,  ಪಾಲಿಕೆ ಸದಸ್ಯರು ಹಾಗೂ ಹಿಂದೂಪರ ಕಾರ್ಯಕರ್ತರ ಜೊತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.

ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ದಕ್ಕೆಯನ್ನುಂಟು ಮಾಡುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ಕೊಟ್ಟರೇ ಮಾಡುತ್ತೇವೆ. ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ತಿರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!