ಧಾರವಾಡದ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿಯವರಿಗೆ ರಾಜ್ಯದ ಪ್ರತಿಷ್ಟಿತ ವಿಶ್ವವಿಧ್ಯಾಲಯಗಳಲ್ಲಿ ಒಂದಾದ ಧಾರವಾಡದ ಕರ್ನಾಟಕ ವಿಶ್ವವಿಧ್ಯಾಲಯ ಪಿ ಎಚ್ ಡಿ ಪದವಿ ಪ್ರಧಾನ ಮಾಡಲಿದೆ. ಕರ್ನಾಟಕ ವಿಶ್ವವಿದ್ಯಾಲಯದ ೭೩ನೇ ಘಟಿಕೋತ್ಸವದಲ್ಲಿ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ ಅವರಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಪಿಎಚ್ ಡಿ ಪ್ರದಾನ ಮಾಡಲಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಚಿಕ್ಕೊಪ್ಪ (ಕೆ.ಎಸ್) ಗ್ರಾಮದ ನಿವಾಸಿಯಾದ, ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ವಿಶ್ವನಾಥ ಕೋಟಿ “ಮೊಬೈಲ್ ಆಧಾರಿತ ಪತ್ರಿಕೋದ್ಯಮ: ಸವಾಲುಗಳು ಮತ್ತು ಅವಕಾಶಗಳು” ಎಂಬ ಮಹಾಪ್ರಬಂಧ ಮಂಡಿಸಿದ್ದಾರೆ. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಸ್. ಎಂ. ಮಾಲಗತ್ತಿ ಅವರು ಮಾರ್ಗದರ್ಶನ ಮಾಡಿದ್ದು, ವಿಶ್ವನಾಥ ಕೋಟಿಯವರಿಗೆ ಧಾರವಾಡ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಮಾಧ್ಯಮ ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.