ಮಹತ್ವದ ಬೆಳವಣಿಗೆಯಲ್ಲಿ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ, ವರಿಷ್ಟರ ನಿರ್ಧಾರದಿಂದ ಮುನಿಸಿಕೊಂಡಿದ್ದ ರಮೇಶ ಜಾರಕಿಹೊಳಿಯವರನ್ನು ಭೇಟಿ ಮಾಡಿದರು. ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ ಬಿ ವೈ ವಿಜಯೇಂದ್ರರನ್ನು ರಮೇಶ ಜಾರಕಿಹೊಳಿ ಆತ್ಮೀಯವಾಗಿ ಬರಮಾಡಿಕೊಂಡರು.
ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ ಉಭಯ ನಾಯಕರು, ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು.ರಮೇಶ ಜಾರಕಿಹೊಳಿ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಿಂದ ಹೊರ ನಡೆದ ಬಳಿಕ, ಪಕ್ಷದ ಚಟುವಟಿಕೆಯಿಂದ ದೂರ ಇದ್ದರು. ಬಸನಗೌಡ ಪಾಟೀಲ ಯತ್ನಾಳ ಜೊತೆ ಕಾರಿನಲ್ಲಿ ಹೊರಟ ರಮೇಶ ಜಾರಕಿಹೊಳಿ ಸಮಾಧಾನ ಪಡಿಸಲು ಸ್ವತಃ ಯಡಿಯೂರಪ್ಪನವರು ಮಾತನಾಡಿದ್ದರು.
ಇದಾದ ಬಳಿಕ ಇವತ್ತು ಖುದ್ದು ವಿಜಯೇಂದ್ರ, ರಮೇಶ ಜಾರಕಿಹೊಳಿ ಭೇಟಿ ಮಾಡಿದ್ದು, ರಮೇಶ, ವಿಜಯೇಂದ್ರರ ಬೆನ್ನು ತಟ್ಟಿದ್ದಾರೆ. ವಿಜಯೇಂದ್ರ ನೇತೃತ್ವದಲ್ಲಿ ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲು ನಿಮ್ಮ ಜೋತೆ ಇರ್ತೇನೆ ಎಂದು ವಿಜಯೇಂದ್ರ ಅವರಿಗೆ ತಿಳಿಸಿದ್ದಾರೆ.
ಸಧ್ಯ ಅಸಮಾಧಾನಗೊಂಡಿದ್ದ ರಮೇಶ ಜಾರಕಿಹೊಳಿಯವರನ್ನು ವಿಶ್ವಾಸಕ್ಕೆ ಪಡೆದುಕೊಂಡಿರುವ ವಿಜಯೇಂದ್ರ, ಮುಂದಿನ ದಿನಗಳಲ್ಲಿ ವಿ ಸೋಮಣ್ಣ ಮತ್ತು ಬಸನಗೌಡ ಪಾಟೀಲ ಯತ್ನಾಳರನ್ನು, ವಿಜಯೇಂದ್ರ ಭೇಟಿ ಮಾಡುವ ಸಾಧ್ಯತೆ ಇದೆ.