Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಆಜಾನ್ ಕೂಗುವದರಿಂದ ಶಬ್ದ ಮಾಲಿನ್ಯ ಉಂಟಾಗೋದಿಲ್ಲ / ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು

ಆಜಾನ್ ವಿಷಯಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ಮಸೀದಿಗಳಲ್ಲಿ ದಿನಕ್ಕೆ 5 ಹೊತ್ತು ಆಜಾನ್ ದ್ವನಿವರ್ಧಕ ಬಳಸುವದರಿಂದ ಶಬ್ದ ಮಾಲಿನ್ಯ ಉಂಟಾಗೋದಿಲ್ಲ ಎಂದು ಗುಜರಾತ್ ಹೈಕೋರ್ಟ ತೀರ್ಪು ನೀಡಿದೆ. ದ್ವನಿವರ್ಧಕಗಳಲ್ಲಿ ಆಜಾನ್ ಕೂಗುವದನ್ನು ನಿಷೇಧಿಸಬೇಕೆಂದು, ಧರ್ಮೇಂದ್ರ ಪ್ರಜಾಪತಿ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರವಾಲ್ ಮತ್ತು ಅನಿರುದ್ದ ಮಯೀ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಬಹಳ ವರ್ಷಗಳಿಂದ ಅಜಾನ್ ಹೇಳುತ್ತಾ ಬರಲಾಗುತ್ತಿದೆ ಅದು ಆ ಧರ್ಮದ ನಂಬಿಕೆ ಎಂದ ವಿಭಾಗೀಯ ಪೀಠ, ಅದು ದಿನದಲ್ಲಿ ಕೇವಲ 10 ನಿಮಿಷಗಳಲ್ಲಿ ಮುಗಿದು ಹೋಗುವ ಪ್ರಕ್ರಿಯೆ ಎಂದು ಹೇಳಿತು.

ಇದು ಸಂಪೂರ್ಣ ತಪ್ಪು ಕಲ್ಪನೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದ್ದು, ಆಜಾನ್ ಸಮಯದಲ್ಲಿ ಶಬ್ದ ಡೆಸಿಬಲ್‌ಗಳನ್ನು ಅಳೆಯಲು ವೈಜ್ಞಾನಿಕ ವಿಧಾನದ ಆಧಾರದ ಮೇಲೆ ಯಾವುದೇ ಅಡಿಪಾಯವನ್ನು ರಚಿಸಲು ಅರ್ಜಿಯು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!