ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ಗರಿಗೆದರಿದೆ. ಸಂಪೂರ್ಣ ಬಹುಮತ ಪಡೆದು ಬೀಗುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರಕ್ಕೆ, ಲೋಕಸಭಾ ಚುನಾವಣೆ ಪ್ರತಿಷ್ಟೆಯಾಗಿ ಪರಿಣಮಿಸಿದೆ. ಅಲ್ಪಸಂಖ್ಯಾತ ಮುಖಂಡರು ಮತ್ತು ಮಂತ್ರಿಗಳು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಂರಿಗೆ ಟಿಕೇಟ್ ನೀಡುವಂತೆ ಆಗ್ರಹಿಸಿದ್ದಾರೆ.
ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ ಖಾನ ಹಾಗೂ ಸಲೀಮ್ ಅಹ್ಮದ ಮೂರು ಲೋಕಸಭಾ ಕ್ಷೇತ್ರಗಳನ್ನು ಮುಸ್ಲಿಂರಿಗೆ ಬಿಟ್ಟು ಕೊಡುವಂತೆ ಬಹಿರಂಗವಾಗಿಯೇ ಆಗ್ರಹಿಸಿದ್ದಾರೆ. ಬೆಂಗಳೂರು ಸೆಂಟ್ರಲ್, ಬೀದರ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಒತ್ತಡ ಹೇರುತ್ತಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿ ಸೇವೆ ಸಲ್ಲಿಸಿರುವ ಐ ಜಿ ಸನದಿಯವರ ಪುತ್ರ ಶಾಕೀರ ಸನದಿ ಹಾವೇರಿ ಲೋಕಸಭಾ ಕ್ಷೇತ್ರದ ಪ್ರಭಲ ಅಕಾಂಕ್ಷಿಯಾಗಿದ್ದಾರೆ. ರಾಹುಲ್ ಗಾಂಧಿಯವರ ಜೊತೆ ಉತ್ತಮ ಒಡನಾಟ ಹೊಂದಿರುವ ಶಾಕೀರ ಸನದಿ ಕಾಂಗ್ರೇಸ್ ಪಕ್ಷದ ಹಲವು ಜವಾಬ್ದಾರಿ ನಿಭಾಯಿಸಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಜನರ ಜೊತೆ ಬೆರೆತು ಪಕ್ಷ ಸಂಘಟನೆ ಮಾಡುವಲ್ಲಿ ಸೈ ಎನಿಸಿಕೊಂಡಿದ್ದಾರೆ.
2019 ರ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೇಟ ನೀಡಬೇಕು ಎಂದು ಆಗ್ರಹ ಕೇಳಿ ಬಂದಾಗ ಅಲ್ಪಸಂಖ್ಯಾತರ ಬದಲು ಗದಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ ಆರ್ ಪಾಟೀಲ ಅವರಿಗೆ ಟಿಕೇಟ್ ನೀಡಲಾಗಿತ್ತು. ಈ ಸಲ ಅಲ್ಪಸಂಖ್ಯಾತ ಮುಸ್ಲಿಂ ಅಭ್ಯರ್ಥಿಯನ್ನು ಕಣ್ಣಕ್ಕಿಳಿಸುವ ಬಗ್ಗೆ ಪಕ್ಷದ ಹೈಕಮಾಂಡ ಚರ್ಚೆ ನಡೆಸಿದೆ ಎನ್ನಲಾಗಿದೆ.