ಧಾರವಾಡ ಜಿಲ್ಲೆಯ ಗಡಿ ಗ್ರಾಮ ಗುಳೇದಕೊಪ್ಪ ಹಾಗೂ ಮಾಡಿಕೊಪ್ಪದ ನಡುವೆ ಮೂರು ಚಿರತೆಗಳು ರೈತರ ಕಣ್ಣಿಗೆ ಬಿದ್ದಿವೆ.
ಹಳೇ ತೆಗೂರು, ಗುಳೇದಕೊಪ್ಪ, ಮದಿಕೊಪ್ಪ ಭಾಗದಲ್ಲಿ ಚಿರತೆಗಳು ಓಡಾಡುತ್ತಿರುವದನ್ನು ಗ್ರಾಮಸ್ಥರು ಖಾತ್ರಿ ಪಡಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಗುಳೇದಕೊಪ್ಪ ಪಂಚಾಯತಿಯಿಂದ ಸುತ್ತ ಮುತ್ತಲಿನ ಗ್ರಾಮದಲ್ಲಿ ಡಂಗುರ ಸಾರಲಾಗಿದೆ.