ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಜೆಡಿಎಸ್ ಅಧ್ಯಕ್ಷರಾದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಕೋರ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಹಾಲಿ ಸಂಸದ ಪ್ರತಾಪ ಸಿಂಹ ಉಪಸ್ಥಿತರಿದ್ದರು.