Download Our App

Follow us

Home » ಅಪರಾಧ » ರಾಮೇಶ್ವರಂ ಕೆಫೆ ಸ್ಫೋಟ. ಹುಬ್ಬಳ್ಳಿಯ ಇಬ್ಬರು NIA ವಶಕ್ಕೆ!

ರಾಮೇಶ್ವರಂ ಕೆಫೆ ಸ್ಫೋಟ. ಹುಬ್ಬಳ್ಳಿಯ ಇಬ್ಬರು NIA ವಶಕ್ಕೆ!

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ NIA ವಶಕ್ಕೆ ಪಡೆದಿದೆ ಎನ್ನಲಾಗಿದೆ. 

ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಕೆಫೆ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ಮತಿನ್ ತಾಹಾ, ಹಾಗೂ ಮುಸಾವೀರ ಹುಸೇನ್ ಎಂಬುವವರಿಗೆ ಆರ್ಥಿಕ ಸಹಾಯ ಮಾಡಿದ್ದರು ಎನ್ನಲಾಗಿದೆ. 

ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿಯಾಸ ಚೋಟು ಹಾಗೂ ಈತನ ಸಹೋದರ ಆಜೀಜ್ ಅಹ್ಮದ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ದಾಳಿ ಸಂದರ್ಭದಲ್ಲಿ ಕೆಲ ಡಿಜಿಟಲ್ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದ್ದು, ಇಬ್ಬರನ್ನು ಬೆಂಗಳೂರಿನಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಜ್ಯ ಪತ್ರಿಕೆಗಳು ವರದಿ ಮಾಡಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!