Download Our App

Follow us

Home » ಅಪಘಾತ » ಕೆರೆಯಲ್ಲಿ ಈಜಲು ಹೋದವ ನಾಪತ್ತೆ. ಹುಡುಕಾಟ ನಡೆಸಿದ ಪೊಲೀಸರು

ಕೆರೆಯಲ್ಲಿ ಈಜಲು ಹೋದವ ನಾಪತ್ತೆ. ಹುಡುಕಾಟ ನಡೆಸಿದ ಪೊಲೀಸರು

ಈಜಲು ಕೆರೆಗೆ ಇಳಿದ ಯುವಕ ನಾಪತ್ತೆಯಾಗಿರುವ ಘಟನೆ ನವಲಗುಂದ ತಾಲೂಕಿನ ಹಾಳ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ದಾವಲಸಾಬ ಹೆಬಸೂರು ಎಂಬ 24 ವರ್ಷದ ಯುವಕ ಕೆರೆಯಲ್ಲಿ ಈಜಲು ಹೋಗಿದ್ದ.

ಈತ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆತನಿಗಾಗಿ ನಿನ್ನೆ ಸಂಜೆಯಿಂದ ಹುಡುಕಾಟ ನಡೆಸಿರುವ ಅಗ್ನಿಶಾಮಕ ಸಿಬ್ಬಂದಿ ಅಲ್ಲಿಯೇ ಬೀಡು ಬಿಟ್ಟಿದ್ದಾರೆ. 

ಕೆರೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಯುವಕರು ವ್ಯಕ್ತಿಯೋರ್ವ ಕೆರೆಯಲ್ಲಿ ಮುಳುಗಿರುವುದನ್ನು ನೋಡಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಅಗ್ನಿಶಾಮಕದಳ ಭೇಟಿ ನೀಡಿದ್ದು, ಮೃತದೇಹ ಸಿಗದ ಕಾರಣ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಮುಕ್ಕಾಂ ಹೂಡಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!