Download Our App

Follow us

Home » ಕರ್ನಾಟಕ » ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭ. ನಾಳೆ ಶಾಸಕ ವಿನಯ ಕುಲಕರ್ಣಿ ಮನೆಗೆ ಮುತ್ತಿಗೆ

ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭ. ನಾಳೆ ಶಾಸಕ ವಿನಯ ಕುಲಕರ್ಣಿ ಮನೆಗೆ ಮುತ್ತಿಗೆ

ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆದಿರುವ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭಗೊಳ್ಳಲಿದೆ.

ನಾಳೆ 7 ನೇ ಹಂತದ ಹೋರಾಟಕ್ಕೆ ಕರೆ ನೀಡಿರುವ ಕೂಡಲಸಂಗಮ ಶ್ರೀಗಳು, ಶಾಸಕ ವಿನಯ ಕುಲಕರ್ಣಿಯವರ ಧಾರವಾಡದ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. 

ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮೀಸಲಾತಿ ವಿಷಯ ಕುರಿತಂತೆ ನಿರ್ಧಾರ ತೆಗೆದುಕೊಳ್ಳುವದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾತು ತಪ್ಪಿದ್ದಾರೆ ಎಂದು ಶ್ರೀಗಳು ಆರೋಪಿಸಿದ್ದಾರೆ. 

ನಾಳೆ ಮಧ್ಯಾನ್ಹ 12 ಘಂಟೆಗೆ ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಅಲ್ಲಿಂದ ನೇರವಾಗಿ ವಿನಯ ಕುಲಕರ್ಣಿಯವರ ಮನೆಗೆ ತಲುಪಿ, ಮೀಸಲಾತಿಗಾಗಿ ಮುತ್ತಿಗೆ ಹಾಕಲಿದೆ. 

ಅಲ್ಲದೆ, ಪಂಚಮಸಾಲಿ ಶ್ರೀಗಳು, ಜುಲೈ 6 ರಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಹಾಗೂ ಕುಂದಗೋಳ ಶಾಸಕ ಎಮ್ ಆರ್ ಪಾಟೀಲ ಮನೆಗೆ ಮುತ್ತಿಗೆ ಹಾಕಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!