Download Our App

Follow us

Home » ಕರ್ನಾಟಕ » ಉಳ್ಳಾಲ್ ಖಾಜಿ, ಸೈಯ್ಯದ್ ಕೂರತ್ ತಂಙಳ್ ನಿಧನ. ಸಿದ್ದರಾಮಯ್ಯ ಸಂತಾಪ

ಉಳ್ಳಾಲ್ ಖಾಜಿ, ಸೈಯ್ಯದ್ ಕೂರತ್ ತಂಙಳ್ ನಿಧನ. ಸಿದ್ದರಾಮಯ್ಯ ಸಂತಾಪ

ಉಳ್ಳಾಲ್ ಭಾಗದ ಖಾಜಿ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದ ಸುದ್ದಿ ನೋವುಂಟುಮಾಡಿದೆ ಎಂದು ಹೇಳಿದ್ದಾರೆ. 

ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ ಅವರು, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನ. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. 

ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಅವರು, ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!