Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

HDBRTS ಅವ್ಯವಸ್ಥೆ. ನಾಳಿನ ಹೋರಾಟಕ್ಕೆ ಬೆಲ್ಲದ ಬೆಂಬಲ

ಧಾರವಾಡ ದ್ವನಿ ಸಂಘಟನೆ ಆಶ್ರಯದಲ್ಲಿ HDBRTS ಅವ್ಯವಸ್ಧೆ ವಿರುದ್ಧ ನಾಳೆ ಪಕ್ಷಾತೀತ ಹೋರಾಟ ಹಮ್ಮಿಕೊಂಡಿದ್ದು, ಶಾಸಕ ಬೆಲ್ಲದ ಈ ಹೋರಾಟವನ್ನು ಬೆಂಬಲಿಸಿದ್ದಾರೆ. 

ಮೊದಲಿನಿಂದಲೂ BRTS ಯೋಜನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಬೆಲ್ಲದ ಸರ್ಕಾರದ ಗಮನ ಸೆಳೆದಿದ್ದರು. ನಾಳೆಯಿಂದ ಅಧಿವೇಶನ ಆರಂಭವಾಗುವ ಕಾರಣ ನನಗೆ ವೈಯುಕ್ತಿಕವಾಗಿ ಹೋರಾಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 

ಕರ್ನಾಟಕ ಫೈಲ್ಸ್ ಜೊತೆ ಮಾತನಾಡಿದ ಅವರು ಸರ್ಕಾರ ಅನೇಕ ಹಗರಣಗಳನ್ನು ಮಾಡಿದೆ. ಮೂಡಾ ಹಗರಣ, ವಾಲ್ಮೀಕಿ ಹಗರಣದ ಬಗ್ಗೆ ಬಿಜೆಪಿ ಸದನದಲ್ಲಿ ಹೋರಾಟ ನಡೆಸಲಿದೆ ಎಂದರು.

ನಾಳೆ ಬೆಳಿಗ್ಗೆ ನವಲೂರನಿಂದ ಪಾದಯಾತ್ರೆ ಆರಂಭವಾಗಲಿದ್ದು, ಪಾದಯಾತ್ರೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ. ನಾಳೆ ನಡೆಯಲಿರುವ ಹೋರಾಟಕ್ಕೆ 14 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ನಾಳೆ ನಡೆಯಲಿರುವ ಪಾದಯಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ಕೈ ಜೋಡಿಸಬೇಕೆಂದು ಸಂಘಟಕ ಈಶ್ವರ ಶಿವಳ್ಳಿ ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!