Download Our App

Follow us

Home » ಕರ್ನಾಟಕ » ಪತ್ನಿಯಿಂದ ನಿವೇಶನ ವಾಪಸ. ಪತ್ನಿ ಕುರಿತು ಸಿದ್ದರಾಮಯ್ಯನವರ ಭಾವುಕ ಮಾತು. ನನ್ನ ಪತ್ನಿ ದ್ವೇಷದ ರಾಜಕಾರಣಕ್ಕೆ ಬಲಿಯಾಗಬೇಕಾಯ್ತು

ಪತ್ನಿಯಿಂದ ನಿವೇಶನ ವಾಪಸ. ಪತ್ನಿ ಕುರಿತು ಸಿದ್ದರಾಮಯ್ಯನವರ ಭಾವುಕ ಮಾತು. ನನ್ನ ಪತ್ನಿ ದ್ವೇಷದ ರಾಜಕಾರಣಕ್ಕೆ ಬಲಿಯಾಗಬೇಕಾಯ್ತು

ಸಿದ್ದರಾಮಯ್ಯ ನವರ ಮೇಲಿನ ದ್ವೇಷದ ರಾಜಕೀಯಕ್ಕೆ, ಹಿಂಸೆ ಅನುಭವಿಸಿದ ಪತ್ನಿ ಪಾರ್ವತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾವುಕ ರಾಗಿದ್ದಾರೆ. 

ನನ್ನ ವಿರುದ್ಧ ನಡೆದ ಪಿತೂರಿಯಿಂದ ವಿಚಲಿತಳಾದ ನನ್ನ ಪತ್ನಿ ಪಾರ್ವತಿ, ನಿವೇಶನ ಹಿಂದುರಿಗಿಸಿ ಮೂಡಾಕ್ಕೆ ಪತ್ರ ಬರೆದಿದ್ದು ನನಗೆ ಆಶ್ಚರ್ಯ ತರಿಸಿದೆ ಎಂದು ಹೇಳಿದ್ದಾರೆ. 

ನನ್ನ ವಿರುದ್ಧ ನಡೆದ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಪಾರ್ವತಿ ನಿವೇಶನ ಹಿಂದುರಿಗಿಸಿದ್ದಾಳೆ ಎಂದ ಸಿದ್ದರಾಮಯ್ಯನವರು, ಪತ್ನಿಗೆ ಆಗಿರುವ ಮಾನಸಿಕ ಹಿಂಸೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರ ಪತ್ರದ ಸಾರಾಂಶ ಹೀಗಿದೆ. 

ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.

ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!