Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಬಾಬಾ ಸಿದ್ದಿಕಿ ಕೊಲೆ ಪ್ರಕರಣ. ಲಾರೆನ್ಸ್ ಬಿಷ್ಣೋಯ್ ಯನ್ನು ಮಹಾರಾಷ್ಟ್ರ ಪೊಲೀಸರ ವಶಕ್ಕೆ ನೀಡಲು ಸಾಬರಮತಿ ಜೈಲಾಧಿಕಾರಿಗಳ ನಕಾರ

ಮಹಾರಾಷ್ಟ್ರದ ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಲಾರೆನ್ಸ್ ಬಿಷ್ಣೋಯಯನ್ನು ವಿಚಾರಣೆಗೆ ಪಡೆಯಲು ಹೋದ ಮುಂಬೈ ಪೊಲೀಸರಿಗೆ ಹಿನ್ನೆಡೆಯಾಗಿದೆ ಎಂದು ಹೇಳಲಾಗಿದೆ. 

ಲಾರೆನ್ಸ್ ಬಿಷ್ಣೋಯ್ ಅವರನ್ನು ಗುಜರಾತ್ ಪೊಲೀಸರಿಂದ ಮುಂಬೈ ಪೊಲೀಸರಿಗೆ ಕಸ್ಟಡಿಗೆ ವರ್ಗಾಯಿಸುವುದನ್ನು ಗೃಹ ಸಚಿವಾಲಯದ ಆದೇಶ ನಿರ್ಬಂಧಿಸಿದೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿ NDTV ಸುದ್ದಿ ಮಾಡಿದೆ. 

ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿ ಬಂಧಿಯಾಗಿದ್ದಾನೆ. ಮುಂಬೈ ಪೊಲೀಸರು ಸಾಬರಮತಿ ಜೈಲಿನಿಂದ ಬಿಷ್ಣೋಯ್ ಅವರ ಕಸ್ಟಡಿಗೆ ಹಲವು ಮನವಿಗಳನ್ನು ಸಲ್ಲಿಸಿದ್ದಾರೆ. NDTV ವರದಿಯ ಪ್ರಕಾರ ಅವರ ವರ್ಗಾವಣೆಯನ್ನು ತಡೆಯುವ ಗೃಹ ಸಚಿವಾಲಯದ ಆದೇಶದಿಂದಾಗಿ ಗುಜರಾತ್ ಜೈಲು ಅಧಿಕಾರಿಗಳು ಮಹಾರಾಷ್ಟ್ರ ಪೊಲೀಸರ ವಿನಂತಿಗಳನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. 

ಲಾರೆನ್ಸ್ ಬಿಷ್ಣೋಯ್ ಅವರನ್ನು ಎಲ್ಲಿ ಬಂಧಿಸಲಾಗಿದೆಯೋ ಅಲ್ಲಿ ಮಾತ್ರ ವಿಚಾರಣೆ ನಡೆಸಬಹುದು ಎಂದು ಹೇಳಿ, ಮಹಾರಾಷ್ಟ್ರ ಪೊಲೀಸರ ಮನವಿಯನ್ನು ತಳ್ಳಿಹಾಕಿದ್ದಾರೆ ಎನ್ನಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!