Download Our App

Follow us

Home » ಅಪರಾಧ » ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪುರಸಭೆ ಮಾಜಿ ಅಧ್ಯಕ್ಷನ ಮಗ

ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪುರಸಭೆ ಮಾಜಿ ಅಧ್ಯಕ್ಷನ ಮಗ

ಭೂ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬಂದಿದ್ದ ಯುವಕನೊಬ್ಬ ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಘಟನೆ ಮಂಡ್ಯದ ಪಾಂಡವಪುರದಲ್ಲಿ ನಡೆದಿದೆ.

ಭೂ ವಿವಾದದ ಕುರಿತು ಸಾಗರ ಎಂಬಾತನ ಮೇಲೆ ಆತನ ಸಂಬಂಧಿಕರು ದೂರು ನೀಡಿದ್ದರು. ಹೀಗಾಗಿ ಸಾಗರನನ್ನು ಠಾಣೆಗೆ ಕರೆಸಲಾಗಿತ್ತು. ಅಲ್ಲಿಯೇ ಇದ್ದ ಪೊಲೀಸರ ಮೇಲೆ ಜಗಳ ತೆಗೆದ ಸಾಗರ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ.

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾನೆ ಎಂದು ಆರೋಪ ಹೊರಿಸಿ, ಪ್ರಕರಣ ಧಾಖಲಿಸಿಕೊಂಡಿರುವ ಪೊಲೀಸರು ಸಾಗರನನ್ನು ಬಂಧಿಸಿದ್ದಾರೆ.

ಸಾಗರ, ಪುರಸಭೆ ಮಾಜಿ ಅಧ್ಯಕ್ಷನ ಮಗ ಎಂದು ಹೇಳಲಾಗಿದೆ. ಪೊಲೀಸ ಹಾಗೂ ಸಾಗರ ನಡುವೆ ಹೊಡೆದಾಟ ನಡೆದ ವಿಡಿಯೋ ವೈರಲ್ ಆಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!